NEWSನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲಿ ಗ್ಯಾರಂಟಿಗಳದ್ದೇ ಗದ್ದಲ – ಕಲಾಪ ಮುಂದೂಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಪರಿಷತ್ ಕಲಾಪ ಇಂದು ಆರಂಭವಾದ ಬೆನ್ನಲ್ಲೇ ಗದ್ದಲ ಎದ್ದಿದ್ದು, ನಿಲುವಳಿ ಸೂಚನೆ ಕುರಿತಂತೆ ಬಿಜೆಪಿ ಪ್ರಸ್ತಾಪಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಎರಡು ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಜೆಪಿ ಶಾಸಕರು ಸದನ ಬಾವಿಗಿಳಿದು ಘೋಷಣೆ ಕೂಗಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸದನದಲ್ಲಿ ನಿಲುವಳಿ ಪ್ರಸ್ತಾಪಕ್ಕೆ ಮುಂದಾದರು. ಈ ವೇಳೆ ಪ್ರಶ್ನೋತ್ತರ ಕಲಾಪ ಮುಗಿದ ಮೇಲೆ ನಿಲುವಳಿ ಮಂಡಿಸಿ ಎಂದು ಪೂಜಾರಿ ಅವರಿಗೆ ಸಭಾಪತಿ ಎಂ‌.ಕೆ.ಪ್ರಾಣೇಶ್ ಸೂಚನೆ ನೀಡಿದರು. ಈ ವಿಚಾರವಾಗಿ ಸದನದಲ್ಲಿ ಗದ್ದಲ ಎದ್ದಿದ್ದು ಕೂಲಾಹಲವೇ ಸೃಷ್ಟಿಯಾಯಿತು.

ಈ ವೇಳೆ ಸಭಾಪತಿ ಪ್ರಾಣೇಶ್ ಅವರು ಗರಂ ಆದ ಪ್ರಸಂಗವು ನಡೆಯಿತು. ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್​ ಗ್ಯಾರಂಟಿ ಷರತ್ತುಗಳ ವಿಧಿಸಿರುವ ವಿಚಾರವಾಗಿ ನಿಡುವಳಿ ಸೂಚನೆ ಪ್ರಸ್ತಾಪಕ್ಕೆ ಮುಂದಾದರು. ಈ ವೇಳೆ ಸಭಾಪತಿ ಎಂಕೆ ಪ್ರಾಣೇಶ್ ಗರಂ ಆದರು.

ನಿಮಗೆ ನಿಮಯಗಳು ಗೊತ್ತಿದೆ ಅಲ್ವ. ನೀವು ಕೊಟ್ಟ ಮೇಲೆ ನಿಲುವಳಿ ಸೂಚನೆಯನ್ನು ಪರಿಶೀಲನೆ ಮಾಡಿ. ಯಾವ ರೀತಿ ಅವಕಾಶ ನೀಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ಪ್ರಾಣೇಶ್ ಹೇಳಿದರು. ಆದರೆ ಈ ವೇಳೆ ಕಾಂಗ್ರೆಸ್​​ ಸದಸ್ಯರಿಂದ ಬಿಜೆಪಿ ವಿರುದ್ಧ ವಿರೋಧ ವ್ಯಕ್ತವಾಯಿತು. ಪರಿಷತ್ ಕಲಾಪದಲ್ಲಿ ಗದ್ದಲ, ಮಾತಿನ ಚಕಮಕಿ ಮುಂದುವರಿಯಿತು.

ಇದು ಗಂಭೀರವಾಗಿದ್ದು, ಸರ್ಕಾರ ನೀಡಿರುವ ಭರವಸೆಯನ್ನು ಸರಿಯಾಗಿ ಈಡೇರಿಸಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿ. ಹೀಗಾಗಿ ಇಲ್ಲಿ ಪ್ರಸ್ತಾಪ ಮಾಡಬೇಕಿದೆ. ಆದರೆ ಅದಕ್ಕೆ ಅವಕಾಶವನ್ನೇ ಕೊಡದೆ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದರು.

ಇನ್ನು ಗ್ಯಾರಂಟಿಗಳ ಷರತ್ತುಗಳ ಮೇಲೆ ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ಆದರೆ ಪ್ರಶ್ನೋತ್ತರಕ್ಕಿಂತ ಮುಂಚೆ ಚರ್ಚೆಗೆ ಅವಕಾಶ ಇಲ್ಲ ಎಂದ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಭಾಪತಿಗಳು ಕುಳಿತುಕೊಳ್ಳುವಂತೆ ಮನವಿ ಮಾಡಿದ್ದರು. ಆದರೂ ಸದನದಲ್ಲಿ ಆಡಳಿತ – ವಿಪಕ್ಷ ಸದಸ್ಯರ ನಡುವಿನ ಗದ್ದಲ ತಾರಕಕ್ಕೇರಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದಡಲಾಯಿತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ