NEWSಬೆಂಗಳೂರುಸಂಸ್ಕೃತಿ

ರಾಜಣ್ಣ ಮನೆಯಲ್ಲಿ ಗೌರಿಸುತನ ಸಂಭ್ರಮ – ರಾಜಧಾನಿಯಲ್ಲಿ 2,19,153 ಗಣಪನ ವಿಸರ್ಜನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಮಾರಸ್ವಾಮಿ ಬಡಾವಣೆಯ 2ನೇ ಹಂತ 8 ನೇ ಮುಖ್ಯರಸ್ತೆ  12ನೇ ಅಡ್ಡ ರಸ್ತೆಯಲ್ಲಿರುವ ರಾಜಣ್ಣ ಅವರ ಮನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಗಣೇಶ ಮೂರ್ತಿಯನ್ನು ಕೂರಿಸಿ ಸಂಜೆ ವರೆಗೂ ವಿವಿಧ ನೈವೇದ್ಯಗಳನ್ನು ವಿಘ್ನನಿವಾರಕನಿಗೆ ಮಾಡಲಾಯಿತು.

ಬಳಿಕ ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮಹಾ ಮಂಗಳಾರತಿ ಬೆಳಗುವ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ಪೂಜೆಯಲ್ಲಿ ರಾಜಣ್ಣ, ಪ್ರೇಮಾ ರಾಜಣ್ಣ ಸೇರಿದಂತೆ ಅಕ್ಕಪಕ್ಕದ ಮನೆಯವರು ಹಾಗೂ ಸಂಬಂಧಿಕರು ಭಾಗಿಯಾಗಿದ್ದರು.

2,19,153 ಗಣೇಶ ಮೂರ್ತಿಗಳ ವಿಸರ್ಜನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆ.27ರಂದು ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 2.19 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 44,000. ಪಶ್ಚಿಮ ವಲಯ: 60,703. ದಕ್ಷಿಣ ವಲಯ: 79,039. ಬೊಮ್ಮನಹಳ್ಳಿ ವಲಯ: 7,028 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯಿತು.

ಅದರಂತೆ ದಾಸರಹಳ್ಳಿ ವಲಯ: 1,104. ಮಹದೇವಪುರ ವಲಯ: 5,690. ಆರ್.ಆರ್.ನಗರ ವಲಯ: 13,097. ಯಲಹಂಕ ವಲಯ: 8,492 ಸೇರಿ ಒಟ್ಟು 2.19 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ