ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ.
ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೂಡ, ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಕವರ್ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳು ಉತ್ಪಾದಕರು ಹಾಗೂ ದಾಸ್ತಾನುದಾರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪ್ಲಾಸ್ಟಿಕ್ ವಶಕ್ಕೆ ಪಡೆದು, ಕೆ.ಆರ್.ಮಾರುಕಟ್ಟೆಯಲ್ಲಿ ಒಂದು ಗೋಡೌನ್ ಸೀಜ್ ಮಾಡಲಾಗಿದೆ.
ಎಲ್ಲೆಲ್ಲಿ ದಂಡ ಸಂಗ್ರಹಣೆ- ಕೆ.ಆರ್. ಮಾರುಕಟ್ಟೆ: ಕೆ.ಆರ್ ಮಾರುಕಟ್ಟೆ ವ್ಯಾಪ್ತಿಯ ಎ ಬ್ಲಾಕ್ ನಲ್ಲಿ 3 ಪ್ರಕರಣಗಳಿಂದ 29 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 30,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ. ಜೊತೆಗೆ ವೆಂಡರ್ಸ್ ಸಿ ಬ್ಲಾಕ್ ನಲ್ಲಿ 22 ಪ್ರಕರಣಗಳಿಂದ 6310 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 3500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಅವೆನ್ಯೂ ರಸ್ತೆ: ಅವೆನ್ಯೂ ರಸ್ತೆ ವ್ಯಾಪ್ತಿಯ ಬಿ ಬ್ಲಾಕ್ ನಲ್ಲಿ 17 ಪ್ರಕರಣಗಳಿಂದ 300 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 40,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಕಲಾಸಿಪಾಳ್ಯ: ಕಲಾಸಿಪಾಳ್ಯದಲ್ಲಿ 24 ಪ್ರಕರಣಗಳಿಂದ 150 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 45,900/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಯಶವಂತಪುರ ಮಾರುಕಟ್ಟೆ: ಯಶವಂತಪುರ ಮಾರುಕಟ್ಟೆಯಲ್ಲಿ 27 ಪ್ರಕರಣಗಳಿಂದ 110 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 61,800/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.

ಪೀಣ್ಯ ಕೈಗಾರಿಕಾ ಪ್ರದೇಶ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 27 ಪ್ರಕರಣಗಳಿಂದ 450 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 1,00,500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶ: ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶದಲ್ಲಿ 01 ಪ್ರಕರಣಗಳಿಂದ 218 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 50,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಚಾಮರಾಜಪೇಟೆ ಹಾಗೂ ಇತರೆ ಪ್ರದೇಶ: ಚಾಮರಾಜಪೇಟೆ-ಮಕ್ಕಳಕೂಟ, ಅಕ್ಕಿಪೇಟೆ, ಬಳೆಪೇಟೆ ಪ್ರದೇಶದಲ್ಲಿ 37 ಪ್ರಕರಣಗಳಿಂದ 2,000 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 4,07,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಒಟ್ಟಾರೆಯಾಗಿ 158 ಪ್ರಕರಣಗಳಿಂದ 9,567 ಕೆಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದು ರೂ. 7,38,700 ಗಳ ದಂಡದ ಮೊತ್ತವನ್ನು ವಸೂಲಿ ಮಾಡಿ, ಸಾರ್ವಜನಿಕರು ಹಾಗೂ ಮಾರಾಟಗಾರರು ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಹಾಗೂ ಬಟ್ಟೆಯ ಚೀಲಗಳನ್ನು ಬಳಸಿ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಸಹಕರಿಸುವಂತೆ ಮನವಿ ಮಾಡಿದರು.
Related


You Might Also Like
ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ 2,000 ಕೋಟಿ ರೂ. ಲಾಭಗಳಿದ ಶಾಸಕ ವೀರೇಂದ್ರ ಪಪ್ಪಿ: ಇಡಿ ದಾಳಿ ವೇಳೆ ಬಯಲು!
ಚಿತ್ರದುರ್ಗ: ಜನಪ್ರತಿನಿಧಿಗಳು ಎಂದರೆ ಸಾಮಾನ್ಯ ಜನರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬುವುದು...
ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ: 5 ನಗರ ಪಾಲಿಕೆಗಳ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎಲ್ಲ ವಿಭಾಗಗಳ ಕುರಿತು ಸಮಗ್ರ ಪರಿಚಯ ಹಾಗೂ ವಿಶೇಷವಾಗಿ 3 ವಿಷಯಗಳಾದ ರಸ್ತೆ ಗುಂಡಿ, ಬೀದಿ ದೀಪ ಹಾಗೂ ಕಸದ ಸಮಸ್ಯೆ...
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರು ಸುಳ್ಳು ದೂರು ದಾಖಲಿಸಬೇಡಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜತೆಗೆ ನಿಜವಾದ...
ಜಿಬಿಎ-ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ, ಮುಕ್ತ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಕಠಿಣ ಕ್ರಮ: ರಾಜೇಂದ್ರ ಚೋಳನ್
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವ ಉದ್ದೇಶದಿಂದ ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ...
ಆ.5ರ ಮುಷ್ಕರ ದಿನದ ಚಾಲಕ, ನಿರ್ವಾಹಕರ ವೇತನ ಕಡಿತ- ಇದು ನ್ಯಾಯಸಮ್ಮತವೇ?
ಬೆಂಗಳೂರು: ಕಳೆದ 2021ರ ಏಪ್ರಿಲ್ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು. ಈ...
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ
ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ...
ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್
ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ...