NEWSನಮ್ಮಜಿಲ್ಲೆಬೆಂಗಳೂರು

ಆಸ್ತಿ ತೆರಿಗೆ ಪಾವತಿಸದ 7 ಆಸ್ತಿಗಳ ಹರಾಜು ಹಾಕಿದ ಜಿಬಿಎ: ಮುನೀಶ್ ಮೌದ್ಗಿಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ಜಿಬಿಎ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಸುಮಾರು 7,000 ಆಸ್ತಿಗಳಿಂದ ₹437 ಕೋಟಿ ರೂಪಾಯಿಗಳಷ್ಟು ಆಸ್ತಿ ತೆರಿಗೆ ಬಾಕಿ ಉಳಿದಿದೆ. ಪಾವತಿಸದ ತೆರಿಗೆಗಾಗಿ ಬೇಡಿಕೆ ನೋಟಿಸ್‌ಗಳನ್ನು ಜಾರಿ ಮಾಡಲಾಗಿತ್ತು. ಆದರೂ ಪಾವತಿ ಮಾಡಿಲ್ಲ ಎಂದು ಇಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

SMS, IVRS ಕರೆಗಳು ಹಾಗೂ ಸ್ಥಳೀಯ ಮಟ್ಟದಲ್ಲಿ ಫಾಲೋ ಅಪ್ ಮಾಡಿದರೂ ಪಾವತಿ ಆಗಲಿಲ್ಲ. ಆಸ್ತಿಗಳ ಜಪ್ತಿ ಆದೇಶಗಳನ್ನು ಹೊರಡಿಸಲಾಯಿತು. ಆದಾಗ್ಯೂ ಪಾವತಿಸಲಿಲ್ಲ.

ಜಪ್ತಿ ಆದೇಶ ಹೊರಡಿಸಿದ ಬಳಿಕವೂ 60 ದಿನಗಳಿಗಿಂತ ಹೆಚ್ಚು ಅವಧಿ ಕಳೆದರೂ ಪಾವತಿ ಆಗದ ಕಾರಣ, ಕೊನೆಯ ಕ್ರಮವಾಗಿ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 ಅನ್ವಯ, ಆಸ್ತಿಗಳನ್ನು ಹರಾಜಿಗೆ ಇಡಲಾಗಿದೆ ಎಂದು ತಿಳಿಸಿದರು.

ಇನ್ನು ಹರಾಜು ನಡೆಯುವ ಮೊದಲು ಬಾಕಿದಾರರು ತಮ್ಮ ಬಾಕಿ ತೆರಿಗೆಯನ್ನು ಪಾವತಿಸುವ ಅವಕಾಶವಿದ್ದು, ಪಾವತಿ ಮಾಡಿದಲ್ಲಿ ಹರಾಜು ರದ್ದುಪಡಿಸಲಾಗುತ್ತದೆ. ಆದರೆ ಹಲವರು ಇನ್ನೂ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಬಾಕಿ ಇರುವ ಪ್ರಕರಣಗಳಿಂದ ಪ್ರಾರಂಭಿಸಿ, ವಲಯಗಳ ಜಂಟಿ ಆಯುಕ್ತರು ಇಂದು (ಫೆ.21) ಹರಾಜು ಪ್ರಕ್ರಿಯೆ ನಡೆಸಿದ್ದಾರೆ ಎಂದರು.

ಇಂದಿನ ಹರಾಜಿನಲ್ಲಿ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಆಸ್ತಿಗಳು ಮಾರಾಟವಾಗಿರುವ ವಿವರ:
1. ಉತ್ತರ ನಗರ ಪಾಲಿಕೆಯಲ್ಲಿ – 2
2. ಪೂರ್ವ ನಗರ ಪಾಲಿಕೆಯಲ್ಲಿ – 5
ಹರಾಜು ಮಾರಾಟ ಪ್ರಕ್ರಿಯೆ ನಿಯಮಿತವಾಗಿ ಮುಂದುವರಿಯಲಿದೆ. ಹರಾಜು ನೋಟಿಸ್ ಪಡೆದಿರುವ ಎಲ್ಲ ಬಾಕಿದಾರರು ತಮ್ಮ ಬಾಕಿ ತೆರಿಗೆಯನ್ನು ತಕ್ಷಣ ಪಾವತಿಸಲು ವಿನಂತಿಸಲಾಗಿದೆ.

Megha
the authorMegha

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ