NEWSದೇಶ-ವಿದೇಶನಮ್ಮರಾಜ್ಯ

ಕಿರಿಯ ವಕೀಲರಿಗೆ ಗೌರವಾನ್ವಿತ ಸಂಬಳ ಕೊಡಿ: ಹಿರಿಯ ವಕೀಲರಿಗೆ ಸುಪ್ರೀಂ ಕೋರ್ಟ್‌ ಸಿಜೆ ಚಂದ್ರಚೂಡ್ ಕಿವಿ ಮಾತು

ವಿಜಯಪಥ ಸಮಗ್ರ ಸುದ್ದಿ

ಮಧುರೈ: ಕಿರಿಯವ ಕೀಲರು ವೃತ್ತಿಯಲ್ಲಿ ಕಲಿಕೆಗಾಗಿ, ಅನುಭವ ಹೆಚ್ಚಿಸಿಕೊಳ್ಳಲು ಮತ್ತು ಮಾನ್ಯತೆ ಪಡೆಯಲು ಹಿರಿಯ ವಕೀಲರ ಬಳಿ ಬರುತ್ತಾರೆ. ಹೀಗಾಗಿ ಅವರ ಮೇಲೆ ನಿಮ್ಮ ಹಕ್ಕು ಚಲಾಯಿಸುವ ಮನೋಭಾವನೆಯನ್ನು ಬಿಟ್ಟು ಮಾರ್ಗದರ್ಶನ ನೀಡಿ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಕಿವಿ ಮಾತು ಹೇಳಿದರು.

ಮಧುರೈನಲ್ಲಿ ಮದ್ರಾಸ್‌ ಉಚ್ಚನ್ಯಾಯಾಲಯದ ಪೀಠ ಸ್ಥಾಪನೆಯ 20ನೇ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ವಕೀಲರು ತಮ್ಮ ಕಿರಿಯ ವೃತ್ತಿ ಬಾಂಧವರಿಗೆ 5000 ರೂ. ವೇತನ ನೀಡುವ ಪ್ರವೃತ್ತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇಂತಹ ಪ್ರವೃತ್ತಿಯಿಂದ ಯುವ ವಕೀಲರು ವೃತ್ತಿಯಿಂದಲೇ ಶಾಶ್ವತವಾಗಿ ದೂರ ಸರಿಯುವಂತಾಗಬಹುದು ಎಂದು ಆತಂಕ ವ್ಯ ಕ್ತಪಡಿಸಿದರು.

ನೋಡಿ ಕಿರಿಯರಿಂದಲೂ ಹಿರಿಯ ವಕೀಲರು ಕಲಿಯಬೇಕಾದದ್ದು ಬಹಳಷ್ಟಿದೆ. ಕಿರಿಯ ವಕೀಲರು ಸಮಕಾಲೀನ ವಾಸ್ತವಗಳ ಬಗ್ಗೆ ಹೆಚ್ಚು ಜ್ಞಾನವನ್ನು ಹೊಂದಿದ್ದಾರೆ. ಅವರ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಗೌರವಾನ್ವಿತ ಮೊತ್ತವನ್ನು ನೀಡಿ. ಸಾಕಷ್ಟು ಸಂಬಳವಿಲ್ಲದೆ ಕೆಲಸಮಾಡುವುದು ಸರಿಯಲ್ಲ ಎಂದು ಹೇಳಿದರು.

ಇದು ಜನರು ಕಡಿಮೆ ಹಣಕ್ಕಾಗಿ ನಿದ್ರೆ ಮತ್ತು ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡುವ ನಿರೀಕ್ಷೆಯಾಗಿದೆ ಎಂದ ಚಂದ್ರಚೂಡ್ ಅವರು, ಸಾಮಾಜಿಕ ಹಾಗೂ ಕಠಿಣ ಆರ್ಥಿಕ ಹಿನ್ನೆಲೆಯಿಂದ ಬಂದವರೂ ಸಮರ್ಥ ವಕೀಲರಾಗಿ ರೂಪುಗೊಳ್ಳುತ್ತಾರೆ. ಆ ನಿಟ್ಟಿನಲ್ಲಿ ನೀವು ಅವರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ