KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ

- ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ
ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು . ಯಾವುದೇ ಕಾರಣಕ್ಕೂ ವಾರದ ರಜೆ ರದ್ದುಪಡಿಸಬಾರದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾರ್ಮಿಕ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಚಾಲಕ, ನಿರ್ವಾಹಕ ಮತ್ತು ಚಾಲಕ ಕಂ ನಿರ್ವಾಹಕರಿಗೆ ಕಡ್ಡಾಯವಾಗಿ ವಾರದ ರಜೆ ನೀಡಬೇಕು. ಯಾವುದೇ ಕಾರಣಕ್ಕೂ ವಾರದ ರಜೆ ರದ್ದುಪಡಿಸಬಾರದು ಎಂದು ಸಂಸ್ಥೆಯ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು 2010ರ ಏಪ್ರಿಲ್ 5ರಂದೇ ಆದೇಶ ಹೊರಡಿಸಿದ್ದಾರೆ.
ಇನ್ನು ಅನಿವಾರ್ಯ ಮತ್ತು ತುರ್ತು ಸಂದರ್ಭದಲ್ಲಿ ವಾರದ ರಜೆ ರದ್ದುಪಡಿಸಿದ್ದಲ್ಲಿ ನಿಯಮಾವಳಿಯಂತೆ 10 ದಿನಗಳೊಳಗಾಗಿ ಪರಿಹಾರ ರಜೆ ನೀಡಬೇಕು ಎಂದು ಆದೇಶದಲ್ಲಿ ಸ್ಪಷ್ಟ ಸೂಚನೆ ಕೂಡ ನೀಡಿದ್ದಾರೆ.
ಅದರಂತೆ, ಚಾಲಕ, ನಿರ್ವಾಹಕ, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ಎಲ್ಲ ವರ್ಗದ ನೌಕರರಿಗೆ ನಿಗದಿತ ದಿವಸದಂದು ವಾರದ ರಜೆಯನ್ನು ತಪ್ಪದೇ ನೀಡುವುದು ಮತ್ತು ಒಂದು ವೇಳೆ, ಅನಿವಾರ್ಯ ಸಂದರ್ಭಗಳಲ್ಲಿ ವಾರದ ರಜೆಯ ದಿವಸದಂದು ನೌಕರರಿಂದ ಕರ್ತವ್ಯ ನಿರ್ವಹಿಸಿಕೊಂಡ ಪಕ್ಷದಲ್ಲಿ ಮುಂದಿನ ಮೂರು ದಿವಸಗಳೊಳಗಾಗಿ ಪರಿಹಾರ ರಜೆಯನ್ನು ತಪ್ಪದೇ ನೀಡಬೇಕು ಎಂದು 2010ರಲ್ಲೇ ಆದೇಶ ಹೊರಡಿಸಲಾಗಿದೆ.
ಅದೇ ರೀತಿ “ತರಬೇತಿ ಚಾಲಕ, ನಿರ್ವಾಹಕ ಮತ್ತು ಚಾಲಕ ಕಂ ನಿರ್ವಾಹಕರು ತಿಂಗಳಲ್ಲಿ 22 ದಿನಗಳ ಕರ್ತವ್ಯ ನಿರ್ವಹಿಸಿದ್ದಲ್ಲಿ ಅವರಿಗೆ 1 ವಾರದ ರಜೆ, 1 ಪರಿಹಾರ ವಾರದ ರಜೆಯೊಂದಿಗೆ ಅವರ ಸ್ವಂತ ಸ್ಥಳದ ದೂರದ ಆಧಾರದ ಮೇಲೆ 3-4 ದಿನಗಳಿಗೆ ಮೀರದಂತೆ ಬಿಡುವು ನೀಡುವುದು.
ಪುಸ್ತಕದಲ್ಲಿ ಈ ದಿನಗಳನ್ನು ಗೈರುಹಾಜರಿಯೆಂದು ನಮೂದಿಸಬಾರದು ಹಾಗು ಈ ದಿನಗಳಿಗೆ ಶಿಸ್ತಿನ ಕ್ರಮವಾಗಿ ಯಾವುದೇ ದಂಡ ವಿಧಿಸಬಾರದು ಎಂದು ಸೂಚನೆ ನೀಡಿದ್ದು, ಅದನ್ನು ಪರಿಷ್ಕರಿಸಲಾಗಿದೆ.
ಆಡಳಿತ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆ ಸಂಖ್ಯೆ 1394/01.04.2009ರನ್ವಯ ತಿಂಗಳಲ್ಲಿ ಕನಿಷ್ಠ 22 ದಿನಗಳ ಕರ್ತವ್ಯವನ್ನು ನಿರ್ವಹಿಸಿದ ತರಬೇತಿ ಚಾಲಕ, ನಿರ್ವಾಹಕ ಮತ್ತು ಚಾಲಕ ಕಂ ನಿರ್ವಾಹಕರು 1 ಸಾಂಧರ್ಭಿಕ ರಜೆಗೆ ಅರ್ಹರಿದ್ದು, ಜತೆಗೆ 1 ವಾರದ ರಜೆ ಮತ್ತು 2 ದಿವಸಗಳ ಅನುಮತಿಯು ಸೇರಿದಂತೆ ಗರಿಷ್ಠ 4 ದಿವಸಗಳ ಮಟ್ಟಿಗೆ ಅವರ ಸ್ವಂತ ಊರಿಗೆ ಹೋಗಿ ಬರಲು ಅವಕಾಶ ಮಾಡಿಕೊಡುವುದು ಹಾಗೂ ಹಾಜರಾತಿ ಪುಸ್ತಕದಲ್ಲಿ ಈ ಎರಡು ದಿವಸಗಳನ್ನು ಗೈರುಹಾಜರಿಯೆಂದು ನಮೂದಿಸಬಾರದು.
ಮೇಲ್ಕಂಡ ನಿರ್ದೇಶನಗಳು ತಕ್ಷಣದಿಂದ ಜಾರಿಗೆ ಬರುತ್ತದೆ ಮತ್ತು ಈ ನಿರ್ದೇಶನಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಬಳಿಕ ಅಂದರೆ ಪ್ರಸ್ತುತ ಕೆಲ ಬದಲಾವಣೆಗಳು ಕೂಡ ಮಾಡಲಾಗಿದೆ. ಆದರೆ, ವಾರದಲ್ಲಿ ಒಂದು ದಿನ ಗೈರಾದರೆ ವಾರದ ರಜೆ ಬರುವುದಿಲ್ಲ ಎಂದು ಕೆಲ ಡಿಪೋಗಳಲ್ಲಿ ಡಿಎಂಗಳು ಹೇಳಿ ಗೈರು ಹಾಜರಿ ತೋರಿಸುತ್ತಾರೆ. ಹೀಗೆ ಮಾಡುವುದಕ್ಕೆ ಡಿಎಂಗಳಿಗೆ ಯಾವುದೇ ಅಧಿಕಾರವಿಲ್ಲ.
ಅಂದರೆ ವಾರದ ರಜೆ ಇರುವ ಹಿಂದಿನ ಅಥವಾ ಮುಂದಿನ ದಿನ ಡ್ಯೂಟಿ ಮಾಡಿದರೆ ವಾರದ ರಜೆ ಜತೆಗೆ ಸಿಎಲ್, ಸಿಎಂಎಲ್, ಇಎಲ್ ಹೀಗೆ ಯಾವುದೇ ರಜೆ ಹಾಕಿದರು ಅನ್ನು ಮಂಜೂರು ಮಾಡಬೇಕು. ಒಂದು ವೇಳೆ ರಜೆ ಮಂಜೂರು ಮಾಡದರೆ ಗೈರುಹಾಜರಿ ತೋರಿಸಿದರೆ ಅಂಥ ಡಿಎಂಗಳ ವಿರುದ್ಧ ಕ್ರಮಕ್ಕೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಬಹುದುವುದು.
Related

You Might Also Like
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...
ವಿಶ್ವವಿಖ್ಯಾತ ಮೈಸೂರು ದಸರಾ ನವ ತರುಣಿಯಂತೆ ಆಚರಣೆಯಲ್ಲಿರುವುದು ಕನ್ನಡಿಗರ-ಕರ್ನಾಟಕದ ಹೆಮ್ಮೆ!
ಮೈಸೂರು ಮಲ್ಲಿಗೆ, ಅರಮನೆಗಳ ನಗರಿ, ಪಾರಂಪರಿಕ ಕಟ್ಟಡಗಳುಳ್ಳ ಸಾಂಸ್ಕೃತಿಕ ನಗರಿ ಎಂಬಿತ್ಯಾದಿಯಾಗಿ ವರ್ಣನೆಗೆ ನಿಲುಕಿ ವಿಶ್ವದಲ್ಲೇ ಚಿರ ಪರಿಚಿತವಾಗಿರುವ ಮೈಸೂರು ಈಗ ಪ್ರವಾಸಿಗರ ಕೇಂದ್ರ ಬಿಂದು. ರಾಜರ...
ಮೈಸೂರು: ದಸರಾ ಆನೆಗಳಿಗೆ ನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ-ಸಂಜೆ ದೈನಂದಿನ ನಡಿಗೆ ತಾಲೀಮು
ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ತಾಲೀಮನ್ನು ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಈಗಾಗಲೇ ಆರಂಭಿಸಿದ್ದು, ಈ ತಾಲೀಮಿನಲ್ಲಿ ಗಜಪಡೆಯ ಮೊದಲ ಹಂತದ 9 ಆನೆಗಳು...
ಸಾರಿಗೆ ನೌಕರರ ಮುಷ್ಕರಕ್ಕೆ ಸಿಎಂ, ಸಾರಿಗೆ ಸಚಿವರು, ಎಂಡಿಗಳೇ ನೇರ ಕಾರಣ: ಲಿಖಿತ ಸಮಜಾಯಿಷಿ ಕೊಡುತ್ತಿರುವ ನೌಕರರು
ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ಮಾಡಲು ಮೂಲ ಕಾರಣ ನಾಲ್ಕೂ ಸಂಸ್ಥೆಯ ಆಡಳಿತ ವರ್ಗದ ಮುಖ್ಯಸ್ಥರೇ ಎಂದು ಆಪಾದನಾ ಪತ್ರ ನೀಡಿರುವ ಶಿಸ್ತುಪಾಲನಾಧಿಕಾರಿಯೂ...