NEWSಕೃಷಿನಮ್ಮರಾಜ್ಯ

ರಾಜ್ಯದ ಹಿತಾಶಕ್ತಿಗಾಗಿ ಮೇಕೆದಾಟು ಯೋಜನೆ ತುರ್ತಾಗಿ ನಡೆಸಿ : ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವ ತಮಿಳುನಾಡಿನ 179 ಟಿಎಂಸಿ ಹಂಚಿಕೆ ನೀರನ್ನು ಹರಿಸಿ ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಬಳಸಿಕೊಳ್ಳಲು ಅಗತ್ಯವಾಗಿ ಮೇಕೆದಾಟು ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ತಮಿಳುನಾಡಿನ ಒತ್ತಡದ ಮುಲಾಜಿಗೆ ಮಣಿಯಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಇಂದು ರಾಜ್ಯದ ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿಸುವ ಬಗ್ಗೆ ನ್ಯಾಯಾಲಯದಲ್ಲಿರುವ ತಡೆಯಾಜ್ಞಾ ತೆರವುಗೊಳಿಸುವ ಬಗ್ಗೆ ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿಪಡಿಸುವ ಬಗ್ಗೆ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜತೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಕೃಷಿ ಮಾರುಕಟ್ಟೆ ಸಬಾಂಗಣದಲ್ಲಿ ಚರ್ಚಿಸಿದ ಬಳಿಕ ಮಾತನಾಡಿದರು.

ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಏರಿಕ್ಕೆ ಮಾಡಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ ಒಂದು ಚೀಲ ಗೊಬ್ಬರಕ್ಕೆ 500ರೂ ಏರಿಕೆಯಾಗಿದೆ ರೈತರ ಬತ್ತಕ್ಕೆ 140ರೂ ಮಾತ್ರ ಏರಿಕೆ ಯಾಕೆ?

ಗೋಹತ್ಯ ನಿಷೇಧ ಕಾಯ್ದೆ ರದ್ದು ಬೇಡ ರಾಜಕೀಯ ಪಕ್ಷಗಳು ಗೋವುಗಳ ವಿಚಾರದಲ್ಲಿ ರಾಜಕಾರಣ ಮಾಡಬಾರದು ಕೋಣನಿಗೂ ಹಸುವಿಗೂ ಹೋಲಿಕೆ ಮಾಡಿರುವುದು ಸರಿಯಲ್ಲ. ಹಸುಗಳು ರೈತರ ಬದುಕಿಗೆ ಆಸರೆಯಾಗಿ ಜೀವನಾಡಿಯಾಗಿ ಕಾಯಕ ಮಾಡುತ್ತವೆ. ರೈತರು ಗೌರವ ಭಾವನೆಯಿಂದ ಪೂಜಿಸುತ್ತೇವೆ ಗೋವುಗಳನ್ನು ಹತ್ಯೆ ಮಾಡಿದರೆ ಏನು ತಪ್ಪು ಎಂದು ಹೇಳುವುದು ಒಪ್ಪುವಂತದ್ದಲ್ಲ ಎಂದು ಹೇಳಿದರು.

ಕಾನೂನಿನಲ್ಲಿರುವ ಅಡೆ ತಡೆಗಳನ್ನು ನಿವಾರಿಸಿ ತಪ್ಪೇನಿಲ್ಲ. ಗೋಹತ್ಯೆ ಕಾಯ್ದೆ ರದ್ದು ಮಾಡಲು ರೈತರು ಒಪ್ಪುವುದಿಲ್ಲ ಎಂದ ಅವರು, ಕಾಡು ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ಭಾಗದ ರೈತರ ಬದುಕು ಭಯದಿಂದ ತತ್ತರಿಸುತ್ತಿದೆ ಕಾಡಿನ ಒಳಗೆ ಇರುವ ಎಲ್ಲ ರೆಸಾರ್ಟ್‌ಗಳು, ಮೋಜಿನತಾಣಗಳನ್ನು ಬಂದ್ ಮಾಡಲು, ಗಣಿಗಾರಿಕೆಯನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕಬ್ಬು ಹಾಗೂ ಸಕ್ಕರೆ ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗಿರಿ, ರೈತ ಮುಖಂಡರಾದ ರೇವಣ್ಣಯ್ಯ ಹಿರೇಮಠ ಪರಶುರಾಮ್ ಎತ್ತಿನ ಗುಡ್ಡ, ಎನ್‌.ಎಚ್. ದೇವಕುಮಾರ, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಾನೂನು ಸಲಹೆಗಾರ ಕಿಸಾನ್, ನರಸಿಂಹಮೂರ್ತಿ, ಸಿದ್ದಲಿಂಗ ಒಡೆಯರ್, ಮಹಾಂತೇಶ್ ಕರಟಗಿ ಇದ್ದರು.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?