NEWSದೇಶ-ವಿದೇಶನಮ್ಮರಾಜ್ಯ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್‌ ನ್ಯೂಸ್‌: ಬೆಲೆಯಲ್ಲಿ ಭಾರಿ ಇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ.

19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಈ ಮೂಲಕ ವಾಣಿಜ್ಯ ವಲಯದವರಿಗೆ ಬೆಳ್ಳಂಬೆಳಗ್ಗೆ ಗುಡ್‌ನ್ಯೂಸ್‌ ನೀಡಿದೆ ಸರ್ಕಾರ.

ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಅಡುಗೆ ತಯಾರಿಕರು ನಿಟ್ಟುಸಿರು ಬಿಡುವಂತಾಗಿದೆ.

14.2 ಕಿಲೋ ಸಿಲಿಂಡರ್‌ನ ಗೃಹ ಬಳಕೆ ಅಡಿಗೆ ಅನಿಲದ ಬೆಲೆಯನ್ನು ಕಳೆದ ಏಪ್ರಿಲ್‌ 7ರಂದು 805.50ರಿಂದ 855.50 ರೂ.ಗೆ ಹೆಚ್ಚಳ ಮಾಡಿದ್ದು, ಈ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದು ಸಾಮಾನ್ಯ ಬಳಕೆದಾರರಿಗೆ ಮಾತ್ರವಲ್ಲ, ಉಜ್ವಲ ಸ್ಕೀಮ್ ಫಲಾನುಭವಿಗಳಿಗೂ ಈ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ.

ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್​​ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ತಿಳಿಸಿದ್ದು, ಇಂದಿನಿಂದಲೇ ದರ ಅನ್ವಯವಾಗಲಿದೆ ಎಂದು ವಿವರಿಸಿದ್ದಾರೆ.

ವಾಣಿಜ್ಯ ಬಳಕೆಯ ಅನಿಲದ ಬೆಲೆಯನ್ನು ಏಪ್ರಿಲ್‌ನಲ್ಲಿ 41 ರೂ.ಗಳಷ್ಟು ಕಡಿಮೆ ಮಾಡಲಾಯಿತು. ನಂತರ ಮೇ ತಿಂಗಳಲ್ಲಿ 14.50 ರೂ. ಮತ್ತು ಜೂನ್‌ನಲ್ಲಿ 24 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು. ಇಂದು ಮತ್ತೆ 58.50 ರೂ.ಗಳಷ್ಟು ಕಡಿಮೆಯಾಗಿದ್ದು ಕಮರ್ಷಿಯಲ್ ಮಂದಿಗೆ ಖುಷಿ ನೀಡಿದೆ ಸರ್ಕಾರ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ