NEWSನಮ್ಮಜಿಲ್ಲೆರಾಜಕೀಯ

ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ

ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಪ್ರತಿಯೊಬ್ಬ ನಾಗರಿಕನ ದೈನಂದಿನ ಬದುಕನ್ನು ಸುಗಮಗೊಳಿಸಿ, ಇಡೀ ನಗರವನ್ನು ಬೆಸೆಯುವಂತಹ ದೂರದೃಷ್ಟಿಯುಳ್ಳ ಯೋಜನೆಗಳಲ್ಲೇ ನಮ್ಮ ಬೆಂಗಳೂರಿನ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋ ಮಹತ್ತರ ಪಾತ್ರ ವಹಿಸುತ್ತಿದೆ -ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ನನ್ನೂರು ಕನಕಪುರಕ್ಕೆ ಹೋಗುವಾಗ, ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ, ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ನಮ್ಮ ಕರ್ನಾಟಕದ ಜನತೆಗೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಮನವರಿಕೆಯಾಯಿತು ಎಂದು ತಿಳಿಸಿದ್ದಾರೆ.

ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಪ್ರತಿಯೊಬ್ಬ ನಾಗರಿಕನ ದೈನಂದಿನ ಬದುಕನ್ನು ಸುಗಮಗೊಳಿಸಿ, ಇಡೀ ನಗರವನ್ನು ಬೆಸೆಯುವಂತಹ ದೂರದೃಷ್ಟಿಯುಳ್ಳ ಯೋಜನೆಗಳಲ್ಲೇ ನಮ್ಮ ಬೆಂಗಳೂರಿನ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಪ್ರಯಾಣದುದ್ದಕ್ಕೂ ಪ್ರೀತಿಯಿಂದ ಮಾತನಾಡಿಸಿ, ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಸಾರ್ವಜನಿಕ ಸೇವೆ ಎಂದರೆ ಕೇವಲ ಅಧಿಕಾರವಲ್ಲ, ಅದು ಜನರ ಆಶೋತ್ತರಗಳಿಗೆ ಕಿವಿಯಾಗುವುದು, ಸದಾ ಕಲಿಯುವುದು ಮತ್ತು ಜನರೊಂದಿಗೆ ಸದಾ ಸಂಪರ್ಕದಲ್ಲಿರುವುದು ಎಂಬುದನ್ನು ಇಂದಿನ ಒಡನಾಟ ನನಗೆ ಮತ್ತೊಮ್ಮೆ ನೆನಪಿಸಿಕೊಟ್ಟಿದೆ ಎಂದರು.

ಇನ್ನು ಬನ್ನಿ, ನಾವೆಲ್ಲರೂ ಕೈಜೋಡಿಸಿ ಇನ್ನಷ್ಟು ಸಮೃದ್ಧ, ಬಲಿಷ್ಠ ಮತ್ತು ಜನಸ್ನೇಹಿ ಕರ್ನಾಟಕವನ್ನು ಕಟ್ಟೋಣ ಎಂದು ಕರೆ ನೀಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ