NEWSನಮ್ಮರಾಜ್ಯಬೆಂಗಳೂರು

ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. .

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿತು. ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟಿಂಗ್‌ಗಳನ್ನು ಮಾಡಲಾಗುತ್ತಿದೆ. ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ ಏನಿದೆ? ಎಸ್‌ಐಟಿ ಯಾಕೆ ರಚಿಸುತ್ತಿದ್ದೆವು ಎಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೆ ಸರ್ಕಾರಕ್ಕೆ ಮುಖ್ಯ ಎಂದು ಹೇಳಿದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...