NEWSಆರೋಗ್ಯದೇಶ-ವಿದೇಶ

ಗರ್ಭಕೋಶ ಕ್ಯಾನ್ಸರ್ ತಡೆಗೆ ಸರ್ಕಾರ ಮುಂದಾಗಬೇಕು: ಸಂಸದೆ ಸುಧಾಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗರ್ಭಕೋಶದ ಕ್ಯಾನ್ಸರ್ ತಡೆಗೆ ಲಸಿಕೆ ಹಾಗೂ ಕರ್ನಾಟಕ ಸೇರಿದಂತೆ ದೇಶದ ಪ್ರವಾಸೋದ್ಯಮ ಅಭಿವೃದ್ಧಿ ಹೆಚ್ಚು ಒತ್ತು ನೀಡಬೇಕು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯ ಸಭೆ ಸದಸ್ಯೆ ಡಾ.ಸುಧಾಮೂರ್ತಿ
ಸದನದ ಗಮನಕ್ಕೆ ತಂದರು.

ರಾಜ್ಯ ಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾಮೂರ್ತಿ ಅವರು ಇದೇ ಮೊದಲ ಬಾರಿಗೆ ರಾಜ್ಯ ಸಭೆಯಲ್ಲಿ ಮಾತನಾಡಿದ್ದು, “ನಾನು ರಾಜಕಾರಣಿಯಲ್ಲ ನನಗೆ ಹೆಚ್ಚು ಮತ್ತು ರಾಜಕೀಯ ಮಾತುಗಳನ್ನು ಆಡಲು ಬರುವುದಿಲ್ಲ ಎನ್ನುತ್ತಲೆ ಮಾತು ಆರಂಭಿಸಿದ ಅವರು ಈ ಎರಡು ಪ್ರಮುಖ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದರು.

ಗರ್ಭಕೋಶ ಕ್ಯಾನ್ಸರ್ ಈಗ ಮಾರಣಾಂತಿಕವಾಗಿದೆ. ಇದರ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮ ಪ್ರಾರಂಭವಾಗಬೇಕು. ತಾಯಿ ಮೃತಪಟ್ಟರೆ ಮಕ್ಕಳು ಜೀವನ ಪೂರ್ತಿ ಅನಾಥರಾಗುತ್ತಾರೆ. ಹೀಗಾಗಿ, ಗರ್ಭಕೋಶ ಕ್ಯಾನ್ಸರ್ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯ ಪ್ರವೇಶಿಸಿದರೆ ಅದನ್ನು 800 ರೂ.ಗೆ ಇಳಿಸಿ ಹೆಣ್ಣು ಮಕ್ಕಳಿಗೆ ಲಸಿಕೆ ಕೊಡಬಹುದು ಎಂದರು.

ಇನ್ನು 9-14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕೋಶ ಲಸಿಕೆ ಇದ್ದು, ಇದನ್ನು ತೆಗೆದುಕೊಂಡರೆ ಕ್ಯಾನ್ಸರ್ ತಡೆಗಟ್ಟಬಹುದು. ನಮ್ಮ ಹೆಣ್ಣು ಮಕ್ಕಳ ಒಳಿತಿಗಾಗಿ ಈ ಲಸಿಕೆ ನೀಡಲು ನಾವು ಉತ್ತೇಜನ ನೀಡಬೇಕು ಎಂದು ಹೇಳಿದರು.

ಇನ್ನು ಭಾರತದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶದಲ್ಲಿ 42 ಪ್ರವಾಸಿ ತಾಣಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್ ಲಿಸ್ಟ್‌ನಲ್ಲಿವೆ. ಅವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇದರ ಜತೆಗೆ ಕರ್ನಾಟಕದ ಶ್ರವಣಬೆಳಗೋಳದಲ್ಲಿನ ಬಾಹುಬಲಿ ಮೂರ್ತಿ, ಬದಾಮಿ, ಐಹೊಳೆ, ಮಧ್ಯ ಪ್ರದೇಶದ ಮಾಂಡು, ದೇಶದ ಗುಹೆಗಳು, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ