NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಿಮ್ಮ ದ್ವಂದ ನಿಲುವು ಬಿಟ್ಟರೆ ಸರ್ಕಾರ ನೌಕರರಿಗೆ ಕೊಡಬೇಕಿರುವುದ ಕೊಟ್ಟೆ ಕೊಡುತ್ತದೆ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಹೆಸರಲ್ಲಿ ಅನೇಕ ಸಂಘಟನೆ ಕಟ್ಟಿಕೊಂಡು ನೌಕರರ ಹಿತ ಕಾಪಾಡುವಲ್ಲಿ ವಿಫಲವಾಗಿವೆ.

ಸಂಘಟನೆಗಳ ನಾಯಕರೇ ನೌಕರರ ನಿತ್ಯದ ಜೀವನವನ್ನು ಒಂದು ಸಾರಿ ತಮ್ಮ ಕಣ್ಣ ಮುಂದೆ ತಂದು ಕೊಳ್ಳಿ… ನಾವು ಮಾಡುವ ಕೆಲಸಕ್ಕೆ ಸರಿಯಾದ ವೇತನ ಸಿಗುತ್ತಿದೆಯಾ? ಜೀವನ ಸರಿಯಾಗಿ ನಡೆಯುತ್ತಿದೆಯಾ? ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವ? ನೌಕರರ ಕೌಟುಂಬಿಕ ಸಮಸ್ಯೆಗಳು ಏನು ಎಂಬ ಬಗ್ಗೆ ತಮಗೆ ಅರಿವಿದೆಯಾ?

ತಾವುಗಳು ಹತ್ತಾರು ಸಂಘಟನೆ  ಕಟ್ಟಿಕೊಂಡು ತಮ್ಮಗಳಲ್ಲೇ ಪೈಪೋಟಿ ಮಾಡುತ್ತಾ, ತಮ್ಮಗಳ ಸಂಘಟನೆಗಳ ಅಸ್ತಿತ್ವ ಕಾಪಾಡಿಕೊಳ್ಳುವುದಕ್ಕೆ ನೌಕರರ ನೈಜ ಸಮಸ್ಯೆಯನ್ನೇ ಮರೆಯುತ್ತಿದ್ದೀರಾ ಅಲ್ವಾ? ನಿಮಗೆ ಇದೇ ಮುಖ್ಯ ವಾಗಿದೆ.  ಇದು ನಿಮಗೇ ಸರಿ ಅನಿಸುತ್ತದೆಯೇ ಒಮ್ಮೆ ಯೋಚಿಸಿ.

ನಿಮ್ಮ ಸಂಘಟನೆ ಯಾವುದೇ ಆಗಿರಲಿ, ಬಲ ಎಷ್ಟೇ ಇರಲಿ, ಇದೊಂದು ಬಾರಿ ಎಲ್ಲರೂ ಸೋತು ಬಿಡಿ. ನೌಕರರ ಹಿತಕ್ಕಾಗಿ, ನೌಕರರ ಅನುದಿನದ ಬೇಡಿಕೆ ಈಡೇರಿಕೆಗಾಗಿ, ನೌಕರರ ನೊಂದಿರುವ ಮನಸಿಗಾಗಿ. ನೀವು ಇದೀಗ ಸೋತು ನೌಕರರ ಪರವಾಗಿ ನಿಂತುಬಿಡಿ.

ಆಗ ಮಾತ್ರ ನಿಮ್ಮ ಸಂಘಟನೆಗಳು ನೌಕರರ ಮನಸಲ್ಲಿ ಉಳಿಯುತ್ತವೆ ಜತೆಗೆ  ನಿಮ್ಮ ಅಸ್ತಿತ್ವವೂ ಉಳಿಯುತ್ತದೆ. ಸರ್ಕಾರ ಕೂಡಾ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ.

ಬೇರೆ ಇಲಾಖೆಗಳು, ನಿಗಮಗಳ ವೇತನ ಗಮನದಲ್ಲಿ ಇಟ್ಟುಕೊಂಡು ಸರ್ಕಾರ ಮತ್ತು ಆಡಳಿತ ಮಂಡಳಿ ಜತೆಗೆ ಮಾತನಾಡಿ, ಸರಿ ಸಮಾನ ವೇತನಕ್ಕಾಗಿ ಸಂಸ್ಥೆಯ ಬಹುತೇಕ ಅಧಿಕಾರಿಗಳು, ನೌಕರರ ಒಲವು ಇರುವಾಗ ಅದರ ಕಡೆಗೆ ತಾವೆಲ್ಲರೂ ಒಟ್ಟಾಗಿ ಒಪ್ಪಿ ಸರ್ಕಾರಕ್ಕೆ ಒತ್ತಾಯ ಮಾಡಿ.

ಅಕಸ್ಮಾತ್ ನಮ್ಮದೇ ನಡೆಯಬೇಕು ಅಗ್ರಿಮೆಂಟ್ ಆಗಲೇಬೇಕು ಅನ್ನೋ ಹಾಗಿದ್ರೆ ಸರಿ ಸಮಾನ ವೇತನಕ್ಕೆ ಸಮಾನ ರೀತಿ ಬರುವ ಅಗ್ರಿಮೆಂಟ್ ಮಾಡಿಸಿ ಕೊಡಿ. ಬಂದಿರುವ ಸುಸಮಯದಲ್ಲಿ ತಮ್ಮಗಳ ಸ್ವಾರ್ಥ ನಿಲುವು ನಿರ್ಧಾರ ಬದಿಗೊತ್ತಿ ಒಗ್ಗಟ್ಟಿನಲ್ಲಿ ನಿಂತರೆ ನಮ್ಮಯ ಎಲ್ಲ ಬೇಡಿಕೆಗಳು ಈಡೇರುತ್ತವೆ.

ನಾವೆಲ್ಲರೂ ಅತ್ಯಂತ ವಿನಮ್ರ ವಾಗಿ ಕೇಳೋದು ಇಷ್ಟೇ ಹಿಂದಿನದೆಲ್ಲ ಬಿಟ್ಟು ಸರ್ಕಾರದ ಜತೆಗೆ ಒಗ್ಗಟ್ಟಿನಲ್ಲಿ ತಮ್ಮಗಳ ಅಭಿಪ್ರಾಯ ಮಂಡಿಸಿ, ಈಡೇರಿಸುವಂತೆ ಒತ್ತಾಯಿಸುವುದು ಸೂಕ್ತ.

ಇನ್ನು ಅಧಿಕಾರಿಗಳ ಸಂಘಟನೆಗಳ ಮುಖಂಡರು ಕಳೆದ 2024ರ ಅಕ್ರೋಬರ್‌ನಲ್ಲಿ ಮತ್ತು ಅದರ ನಂತರ ಒಂದೆರಡು ಬಾರಿ ವೇತನ ಆಯೋಗದಂತೆ ವೇತನ ಕೊಡಿ ಎಂದು ಸರ್ಕಾರಕ್ಕೆ ಹಾಗೂ ಸಾರಿಗೆ ಸಚಿವರಿಗೆ ಮನವಿ ಕೊಟ್ಟಿದ್ದು ಬಿಟ್ಟರೆ ಮತ್ತೆ ಏನನ್ನು ಮಾಡಲಿಲ್ಲ. ಜತೆಗೆ ಮುಷ್ಕರವನ್ನು ಬೆಂಬಲಿಸುವ ಹೇಳಿಕೆಯನ್ನು ನೀಡಲಿಲ್ಲ. ಇದರಿಂದ ಸರ್ಕಾರ ಇನ್ನಷ್ಟು ವಿಳಂಬಧೋರಣೆ ತಳಿಯುವುದಕ್ಕೆ ದಾರಿಯಾಯಿತು.

ಇನ್ನಾದರೂ ಅಧಿಕಾರಿಗಳ ಸಂಘಟನೆಗಳ ಮುಖಂಡರು ಈ ಬಗ್ಗೆ ಎಚ್ಚೆತ್ತು ನಾವೆಲ್ಲರೂ ಒಂದೆ ಎಂಬ ನಿಲುವಿನೊಂದಿಗೆ ಹೋದರೆ ಸರ್ಕಾರ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ ಈಗ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಜತೆಗೆ ಅದರ 16 ತಿಂಗಳ ವೇತನ ಹಿಂಬಾಕಿಯನ್ನು ಕೊಡಲು ಒಪ್ಪುತ್ತದೆ. ಇದಕ್ಕೆ ಸಂಘಟನೆಗಳ ಮುಖಂಡರು ಒಮ್ಮತದಿಂದ ನಡೆದುಕೊಳ್ಳಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!