NEWSನಮ್ಮರಾಜ್ಯ

ರಾಜ್ಯಮಟ್ಟದ ಪತ್ರಕರ್ತರ ಬೃಹತ್ ಸಮ್ಮೇಳನ: ಪತ್ರಕರ್ತರ ಮಿತ್ರರಿಗೆಲ್ಲ ದಾವಣಗೆರೆ ಬೆಣ್ಣೆ ದೋಸೆ ಆತಿಥ್ಯ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಇದೆ ಪ್ರಥಮ ಬಾರಿಗೆ 31 ವರ್ಷಗಳ ನಂತರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವ ಹಾಗೂ ದಾವಣಗೆರೆ ಜಿಲ್ಲಾ ಕಾನಿಪ ಸಂಘದ ಆತಿಥ್ಯ ಮತ್ತು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ನಗರದಲ್ಲಿ 38ನೇ ರಾಜ್ಯಮಟ್ಟದ ಪತ್ರಕರ್ತರ ಬೃಹತ್ ಸಮ್ಮೇಳನದ ಕ್ಷಣ ಗಣನೆ ಆರಂಭವಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಇ. ಎಂ. ಮಂಜುನಾಥ್ ತಿಳಿಸಿದರು.

ದಾವಣಗೆರೆ ನಗರದ ಕಾರ್ಯಕ್ರಮ ನಡೆಯುವ ಸ್ಥಳವಾದ ಶಾಮನೂರ್ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಇ.ಎಂ. ಮಂಜುನಾಥ್, ಹಿಂದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ದಾವಣಗೆರೆಯು ತಾಲೂಕು ಆಗಿದ್ದಾಗ 1992ರಲ್ಲಿ ನಡೆದಿತ್ತು. ಇದೀಗ ದಾವಣಗೆರೆ ಜಿಲ್ಲೆಯಾದ ಮೇಲೆ ಪ್ರಥಮ ಬಾರಿಗೆ ರಾಜ್ಯಮಟ್ಟದ ಸಮ್ಮೇಳನದ ಮೂಲಕ ರಾಜ್ಯದ ಎಲ್ಲಾ ಪತ್ರಕರ್ತರ ಮಿತ್ರರ ಸಮ್ಮಿಲನವಾಗುವಂತಹ ಕಾರ್ಯಕ್ರಮ ಇದಾಗಿದೆ.

ಫೆಬ್ರವರಿ 3 ಮತ್ತು 4ರಂದು ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿರುವ ಈ ಸಮ್ಮೇಳನದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಈಗಾಗಲೇ ನೋಂದಣಿ ಕಾರ್ಯ ಆರಂಭವಾಗಿದೆ. ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯದಿಂದ ಪತ್ರಕರ್ತರು ಈಗಾಗಲೇ ದಾವಣಗೆರೆಗೆ ಆಗಮಿಸಿದ್ದಾರೆ. ರಾಜ್ಯದಿಂದ ಬರುವ ಪತ್ರಕರ್ತರ ಮಿತ್ರರಿಗೆಲ್ಲ ಆತಿಥ್ಯ ನೀಡಲು ಸಜ್ಜುಗೊಂಡಿದ್ದೇವೆ.

ಫೆಬ್ರವರಿ 3ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಪತ್ರಕರ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಪತ್ರಕರ್ತರಿಗೆ ಸಂಬಂಧಿಸಿದಂತೆ ನಾನಾ ವಿಶೇಷ ಗೋಸ್ಟಿಗಳು ಹಿರಿಯ ಪತ್ರಕರ್ತರಿಂದ ನಡೆಯಲಿವೆ ಎಂದು ಸಮ್ಮೇಳನ ಕಾರ್ಯಕ್ರಮದ ಕುರಿತಾಗಿ ವಿವರಣೆ ನೀಡಿದರು.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಮಾತನಾಡಿ, ಬರುವ ಫೆಬ್ರವರಿ 3 ಮತ್ತು 4ರಂದು ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿರುವ ಈ ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಒಟ್ಟಿನಲ್ಲಿ ಈ ಸಮ್ಮೇಳನವು ಪತ್ರಕರ್ತರ ಹಬ್ಬ – ಜಾತ್ರೆ ಎಂತಾಗಲಿದೆ ಎಂದು ಬಣ್ಣಿಸಿದರು.

ಸಮ್ಮೇಳನವು 31 ವರ್ಷಗಳ ಹಿಂದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ತಾಲ್ಲೂಕು ಆಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ರಾಜನಹಳ್ಳಿ ಹನುಮಂತಪ್ಪ ಧರ್ಮಶಾಲೆಯಲ್ಲಿ ನಡೆದಿತ್ತು. ಈಗ ದಾವಣಗೆರೆ ರಚನೆಯಾದ ನಂತರ ಇದೇ ಪ್ರಪ್ರಥಮ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ದಾವಣಗೆರೆ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ರಾಜ್ಯದಿಂದ ಆಗಮಿಸಿರುವ ಪತ್ರಕರ್ತರಿಗೆ ಮುಂಜಾನೆ ಉಪಾಹಾರಕ್ಕೆ ದಾವಣಗೆರೆಯ ಬೆಣ್ಣೆ ದೋಸೆ ಬಡಿಸುವ ಮೂಲಕ ಸ್ವಾಗತಿಸಲಾಯಿತು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...