NEWSನಮ್ಮಜಿಲ್ಲೆನಮ್ಮರಾಜ್ಯ

NWKRTC-ಹೆಮ್ಮೆಯ ಸಿಬ್ಬಂದಿಗಳಿಗೆ ಚಾಲನಾ ಸಿಬ್ಬಂದಿಗಳ ದಿನಾಚರಣೆಯ ಶುಭಾಶಯಗಳು: ಡಿಟಿಒ ಅಶೋಕ ಆ‌ರ್.ಪಾಟೀಲ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹೆಮ್ಮೆಯ ಚಾಲನಾ ಸಿಬ್ಬಂದಿಗಳಿಗೆ ಚಾಲನಾ ಸಿಬ್ಬಂದಿಗಳ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಾವೇರಿ ವಿಭಾಗದ ವಿಭಾಗಿಯ ಸಂಚಾರ ಅಧಿಕಾರಿ ಹಾಗೂ KSRTC ನಿಗಮಗಳ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಆ‌ರ್.ಪಾಟೀಲ ತಿಳಿಸಿದ್ದಾರೆ.

ಇಂದು ಜ.24ರಂದು ಹಾವೇರಿ ಘಟಕಕ್ಕೆ ಭೇಟಿ ನೀಡಿದ ಅವರು, ಚಾಲನಾ ಸಿಬ್ಬಂದಿಗಳ ಸುರಕ್ಷಿತ ಚಾಲನೆ ಮತ್ತು ನಿರ್ವಹಣೆಗೆ ತುಂಬು ಹೃದಯದ ಧನ್ಯವಾದಗಳು. “ನನ್ನ ಹೆಮ್ಮೆ, ನನ್ನ ಚಾಲನಾ ಸಿಬ್ಬಂದಿಗಳು” ಎಂದು ಶ್ಲಾಘಿಸಿದರು.

ಇನ್ನು ಘಟಕದಲ್ಲಿ ಆಯೋಜಿಸಿದ್ದ ಚಾಲನಾ ಸಿಬ್ಬಂದಿಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ, ಚಾಲನಾ ಸಿಬ್ಬಂದಿಗಳಿಗೆ ಹೂಗುಚ್ಛ ನೀಡುವ ಜತೆಗೆ ಸಿಹಿ ಹಂಚುವುದರ ಮೂಲಕ ಶುಭಾಶಯ ಕೋರಿದರು.

ಇದೇ ವೇಳೆ ಸುರಕ್ಷಿತ ಚಾಲನೆ, ಅಪಘಾತ ರಹಿತ ಚಾಲನೆ ನಮ್ಮ ಗುರಿಯಾಗಲೆಂದು ಪ್ರತಿಯೊಬ್ಬ ಚಾಲಕರು ಮನಸ್ಸಿನಲ್ಲಿ ಇಟ್ಟುಕೊಂಡು ಚಾಲನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಇನ್ನು ಪ್ರಯಾಣಿಕರೊಂದಿಗೆ ಸೌಜನ್ಯತೆಯಿಂದ ವರ್ತನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ನಮಗೂ ಒತ್ತಡವಿರುತ್ತದೆ ಆದರೆ ಅದನ್ನು ಪ್ರಯಾಣಿಕರಿಗೆ ತೋರಿಸಿಕೊಳ್ಳದೆ ಅವರೊಂದಿಗೆ ನಗುಮುಖದಲ್ಲೇ ಮಾತನಾಡಿಕೊಂಡು ಅವರು ತಲುಪಬೇಕಾದ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವ ಕಾಯಕದಲ್ಲಿ ತೊಡಗಿರುವ ನೀವು ನಿಜವಾದ ನಾಡಿನ ಹಾಗೂ ಹೆಮ್ಮೆಯ ಸೈನಿಕರು ಎಂದರು.

ನಮ್ಮ ಬಸ್‌ ಚಾಲನೆ ಮಾಡುವುದು ಒಂದು ಕಲೆಯಾಗಿದ್ದು, ಅದನ್ನು ನುರಿತ ಅನುಭವದ ಜತೆಗೆ ತಾಳ್ಮೆಯಿಂದ ಮಾಡಿದರೆ ಪ್ರತಿ ಚಾಲಕರೂ ಇಂಧನ ಉಳಿತಾಯ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಬಗ್ಗೆ ಎಲ್ಲರೂ ತಿಳಿದುಕೊಂಡು ಕರ್ತವ್ಯ ನಿರತರಾಗೋಣ ಎಂದು ನಿರ್ದೇಶನ ನೀಡಿದರು.

ಘಟಕದ ಚಾಲನಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ