CrimeNEWSನಮ್ಮಜಿಲ್ಲೆ

ಅಧಿಕಾರಿಗಳ ಕಿರುಕುಳ: ಅಥಣಿಯ ಹೆಸ್ಕಾಂ ಕಚೇರಿಯ ಸಿಬ್ಬಂದಿ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಅಥಣಿ: ಅಧಿಕಾರಿಗಳ ಕಿರುಕುಳ ತಾಳಲಾರದೆ ಬೆಳಗಾವಿ ನಗರದ ಅಥಣಿಯ ಹೆಸ್ಕಾಂ ಕಚೇರಿಯ ಸಿಬ್ಬಂದಿಯೊಬ್ಬರ ಆತ್ಮಹತ್ಯೆಗೆ ಟ್ವಿಸ್ಟ್‌ ಸಿಕ್ಕಿದೆ.

ಹೆಸ್ಕಾಂ ಕಚೇರಿಯ ಸಿಬ್ಬಂದಿ ಮಂಜುನಾಥ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿದ್ದವರು ಇದೀಗ ಅವರು ಬರೆದಿರುವ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಆತ್ಮಹತ್ಯೆ ಕಾರಣ ಬಹಿರಂಗಗೊಂಡಿದೆ.

ಮೇಲಧಿಕಾರಿ ಹಾಗೂ ಲೈನ್‌ಮನ್‌ನಿಂದ ಆಗುತ್ತಿದ್ದ ಕಿರುಕುಳ, ಭೇದಭಾವವನ್ನು ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ, ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಂಜುನಾಥ್ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ನನಗೆ ಹೆಸ್ಕಾಂ ಉದ್ಯೋಗವೆಂದರೆ ತುಂಬಾ ಇಷ್ಟ. ಆದರೆ ಇವರು ಮಾಡುವ ಭೇದಭಾವ, ನಮಗೊಂದು ಅವರಿಗೊಂದು ಎಂದು ನಡೆದುಕೊಳ್ಳು ತ್ತಿರುವ ರೀತಿ ನೋಡಲು ಆಗುತ್ತಿಲ್ಲ. ನಮ್ಮನ್ನೆಲ್ಲ ವಾರದ ಏಳು ದಿನ, 24 ಗಂಟೆಯೂ ಕೇವಲವಾಗಿ ನೋಡುತ್ತಾರೆ. ಆದರೆ ನಾವು ಮಾಡುವುದು ಸಹ ಹೆಸ್ಕಾಂ ಕೆಲಸ. ಆದರೆ ಇವರು ನಮ್ಮನ್ನು ನೋಡುವ ರೀತಿ ಸರಿಯಿಲ್ಲ. ಅದು ಬದಲಾಗಬೇಕು ಎಂದು ಡೆತ್‌ನೋಟ್‌ನಲ್ಲಿ ಹೇಳಿದ್ದಾರೆ.

ಇನ್ನು ನನ್ನ ಸಾವಿಗೆ ಈ ಇಬ್ಬರೇ ಕಾರಣ. ಬಸು ಕುಂಬಾರ್, ನಜೀರ್ ಡಲಾಯತ್, ಯಾಕೆಂದ್ರೆ ಇವರು ಮಾಡುವ ಮೋಸ, ಅನ್ಯಾಯ, ಮಾನಸಿಕ ಹಿಂಸೆ ದಬ್ಬಾಳಿಕೆ, ಕಿರುಕುಳ ಇದನ್ನೆಲ್ಲ ಸಹಿಸಿಕೊಳ್ಳೋಕೆ ಆಗದೇ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ I LOVE HESCOM’ ಎಂದು ಡೆತ್‌ನೋಟ್‌ ಬರೆದಿದ್ದಾರೆ.

ಈ ಬಗ್ಗೆ ಮಂಜುನಾಥ ಮುತ್ತಗಿ ಪತ್ನಿ ಲಕ್ಷ್ಮೀ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭೇದಭಾವ, ಮಾನಸಿಕ ಹಿಂಸೆ ಮತ್ತು ಕಿರುಕುಳದಿಂದಾಗಿ ತನ್ನ ಪತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಖು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...