NEWS

ಹಾಸನ: ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿ ಚೈಲ್ಡ್‌ರವಿ ಬರ್ಬರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರದಲ್ಲಿ ನಡೆದಿದೆ.

ರವಿ ಅಲಿಯಾಸ್‌ ಚೈಲ್ಡ್‌ ರವಿ (45) ಹತ್ಯೆಯಾದ ರೌಡಿ. ಇಂದು ಬೆಳಗ್ಗೆ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ ರವಿಯ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಹಂತಕರು ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧಲ್ಲಿ ಪರಾರಿಯಾಗಿದ್ದಾರೆ.

ಹಂತಕರಿಂದ ಹತ್ಯೆಯಾದ ಚೈಲ್ಡ್‌ರವಿ ಕೊಲೆ, ಅತ್ಯಾಚಾರ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಕೊಲೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೆನ್ಷನ್‌ ಮೊಹಲ್ಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹತ್ಯೆ ಸಂಬಂಧ ಪೆನ್ಷನ್‌ ಮೊಹಲ್ಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ