Please assign a menu to the primary menu location under menu

NEWSದೇಶ-ವಿದೇಶನಮ್ಮಜಿಲ್ಲೆ

ಹಾಸನ: ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು- ಶ್ರೇಯಸ್ ಪಟೇಲ್‌ಗೆ ಜಯ

ವಿಜಯಪಥ ಸಮಗ್ರ ಸುದ್ದಿ

 ಹಾಸನ:  ಅತ್ಯಾಚಾರ, ಲೈಂಗಿಕ ದೌರ್ಜನ್ಯ  ಆರೋಪಿ  ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲಾಗಿದೆ. ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದೆ.

ಹಾಸನದ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಮುಂದಿನ ಹಂತದ ಮತಎಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸತತ ಹಿನ್ನೆಡೆ ಅನುಭವಿಸಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಅವರ ಭರ್ಜರಿ ಜಯ ಸಾಧಿಸಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ. 16ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು 6,32,090 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

17 ನೇ ಸುತ್ತಿನ ಮತ ಎಣಿಕೆ
ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ – 589829
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ – 632090
42261 ಮತಗಳಿಂದ ಕಾಂಗ್ರೆಸ್ ಮುನ್ನಡೆ
8098 ನೋಟಾ ಮತಗಳು

16ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,32,090
ಜೆಡಿಎಸ್ 5,89,829

14ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,01,152
ಜೆಡಿಎಸ್ 5,61,687

13ನೇ ಸುತ್ತಿನ ಮತ‌ಎಣಿಕೆ
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ – 5,46,289
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ – 5,80,418
7603 ನೋಟಾ ಮತಗಳು
34129 ಮತಗಳಿಂದ ಶ್ರೇಯಸ್‌ಪಟೇಲ್ ಮುನ್ನಡೆ

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ