NEWSನಮ್ಮಜಿಲ್ಲೆಸಂಸ್ಕೃತಿ

ಹಾಸನಾಂಬೆ ದೇಗುಲ ಬಾಗಿಲು ಓಪನ್: ಭಕ್ತರಿಗೆ ನಾಳೆಯಿಂದ ದೇವಿ ದರ್ಶನ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇಂದು ಮಧ್ಯಾಹ್ನ 12 ರಿಂದ 12.30 ಅವಧಿಯಲ್ಲಿ ದೇಗುಲದ ಬಾಗಿಲು ಓಪನ್ ಮಾಡಲಾಗಿದ್ದು, ನಾಳೆಯಿಂದ ದೇವಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

ಬಾಗಿಲು ತೆರೆಯುವ ವೇಳೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಹಾಸನ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮೊದಲಾದ ಗಣ್ಯರಿದ್ದರು. ಜಿಲ್ಲಾಡಳಿತದ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲು ತೆರೆಯಲಾಗಿದ್ದು, ಹಾಸನಾಂಬ ದೇವಿಯ ಸನ್ನಿಧಾನದಲ್ಲಿ ಅರ್ಚಕರ ತಂಡದಿಂದ ವಿವಿಧ ಪೂಜಾ ಕೈಂಕಾರ್ಯಗಳು ನಡೆಯುತ್ತಿವೆ.

ಬಾಗಿಲು ತೆರೆಯುವ ಮುನ್ನ ಐದು ಜನ ಪುರೋಹಿತರ ತಂಡದಿಂದ ದೇವಿಯ ಒಡವೆಗಳನ್ನು ತರಲಾಯಿತು. ಬಳಿಕ ಅರಸರ ವಂಶಸ್ಥರಿಂದ ಬಾಳೆಕಂದು ಕತ್ತರಿಸಿ ದೇವಸ್ಥಾನ ಓಪನ್ ಮಾಡಲಾಯಿತು.

13 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಲಿದ್ದಾರೆ. ನಾಳೆಯಿಂದ ಅಕ್ಟೋಬರ್ 22ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಇಂದು ಮತ್ತು ಅ.23 ರಂದು ಕೊನೆಯ ದಿನ ಭಕ್ತರಿಗೆ ದರ್ಶನ ಇರಲ್ಲ.

ಶಕ್ತಿ ದೇವಿ ಹಾಸನಾಂಬೆ, ವರ್ಷಕ್ಕೊಮ್ಮೆ ಭಕ್ತರನ್ನ ದರ್ಶನ ನೀಡುತ್ತಾಳೆ. ವಿಶೇಷ ಪೂಜಾ ಕೈಂಕರ್ಯಗಳ ಮೂಲಕ ಇವತ್ತು ದೇವಾಲಯ ಗರ್ಭಗುಡಿ ತೆರೆಯುತ್ತಿದೆ. ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನದ ಅಧಿದೇವತೆಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಕಾದಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ