Please assign a menu to the primary menu location under menu

CrimeNEWSನಮ್ಮಜಿಲ್ಲೆ

ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ ಮಂಗಳವಾರ ಸಂಜೆಸಂಭವಿಸಿದೆ.

ಹಾವೇರಿ ಜಿಲ್ಲೆಯ ತವರುಮೆಳ್ಳಿಹಳ್ಳಿ ಗ್ರಾಮದ ನಿವಾಸಿ ಗಿರಿಜವ್ವ ನಾಗಪ್ಪ ಕಟ್ಟೂರ (70) ಕಾಲು ಕಳೆದುಕೊಂಡ ವದ್ಧೆಯಾಗಿದ್ದಾರೆ.

ಗಿರಿಜವ್ವ ಅವರು ಮಗುವಿನ ತೊಟ್ಟಿಲು ಕಾರ್ಯಕ್ರಮಕ್ಕೆಂದು ಮೂಡಲಗಿಗೆ ಹೋಗಿದ್ದರು. ಅಲ್ಲಿಂದ ಹಾವೇರಿಗೆ ವಾಪಸ್‌ ಬಂದು ತಮ್ಮೂರಿಗೆ ಹೋಗಲು ಸವಣೂರು ಮಾರ್ಗದ ಬಸ್ ಹತ್ತುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಗಿರಿಜವ್ವ ಅವರ ಎರಡೂ ಕಾಲುಗಳು ತುಂಡರಿಸಿ ರಕ್ತಸಿಕ್ತವಾಗಿದ್ದವು. ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಕಳುಹಿಸಲಾಗಿದೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಂಬಂಧಿಕರು ಹೇಳಿದಾರೆ.

ಹಾವೇರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹಾವೇರಿ ಸವಣೂರು ಮಾರ್ಗದ ಬಸ್‌ಗೆ ಹತ್ತಲು ಜನರು ಮುಗಿಬಿದ್ದಿದ್ದರು. ಬಸ್‌ಗೆ ಎರಡು ಬಾಗಿಲು ಇದ್ದು, ಎರಡೂ ಕಡೆಯೂ ಜನರು ಹತ್ತುತ್ತಿದ್ದರು. ವೃದ್ಧೆ ಗಿರಿಜವ್ವ ಅವರು, ಮುಂದಿನ ಬಾಗಿಲಿನಲ್ಲಿ ಹತ್ತುತ್ತಿದ್ದರು. ಅದೇ ಸಂದರ್ಭದಲ್ಲಿ ಚಾಲಕ, ಬಸ್ ಚಲಾಯಿಸಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಬಸ್ ಮುಂದಕ್ಕೆ ಹೋಗಿದ್ದರಿಂದ ವೃದ್ಧಿ ಆಯತಪ್ಪಿ ಬಿದ್ದಿದ್ದರು. ಅವರ ಎರಡೂ ಕಾಲುಗಳ ಮೇಲೆಯೇ, ಬಸ್ಸಿನ ಹಿಂಬದಿ ಚಕ್ರ ಹರಿಯಿತು ಎಂದು ತಿಳಿಸಿದರು.

ಈ ನಿಲ್ದಾಣದಲ್ಲೇ ನ.19ರಂದು ಬಸ್ಸಿನ ಚಕ್ರ ಕಾಲುಗಳ ಮೇಲೆ ಹರಿದಿದ್ದರಿಂದ ರೈತ ಕರಿಯಪ್ಪ ಮುಚ್ಚಿಕೊಪ್ಪನವರ ಮೃತಪಟ್ಟಿದ್ದರು. ಪದೇಪದೇ ಅವಘಡಗಳು ಸಂಭವಿಸುತ್ತಿದ್ದು, ನಿಲ್ದಾಣದಲ್ಲಿ ಓಡಾಡಲು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸುರಕ್ಷಿತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...