NEWSನಮ್ಮರಾಜ್ಯಬೆಂಗಳೂರು

ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಬಾನು ಮುಷ್ತಾಕ್ ಅವರನ್ನ ಚಾಮುಂಡಿ ಬೆಟ್ಟ ಹತ್ತಬಾರದು ಅಂತಾರೆ. ಪೂಜೆ ಮಾಡಬಾರದು ಅಂತಾರೆ. ನನಗೆ ಅರ್ಥ ಆಗಲ್ಲ. ನಾವು ಜಾತ್ಯಾತೀತ ವ್ಯವಸ್ಥೆಯಲ್ಲಿ ಇದ್ದೇವೆ. ಸಂವಿಧಾನ ಸಮಾನತೆ ಅಂತ ಹೇಳುತ್ತದೆ. ಅಂಬೇಡ್ಕರ್ ಇದನ್ನೇ ಹೇಳುತ್ತಾರೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನ ಸಮಾಜ ಖಂಡಿಸಬೇಕು ಎಂದು ಕಿಡಿಕಾರಿದರು.

ಮಾಜಿ ಲೋಕಸಭೆ ಸದಸ್ಯನಿಗೆ ಸಂವಿಧಾನ ಗೊತ್ತಿಲ್ಲ ಅಂದರೆ ಏನು ಹೇಳಬೇಕು ಅವನನ್ನ? ಮೂರ್ಖ ಅಂತ ಕರೆಯಬೇಕು. ಇಂತಹ ಮೂರ್ಖರು ನಮ್ನ ದೇಶದಲ್ಲಿ ಇದ್ದಾರೆ. ಇಂತಹ ಮೂರ್ಖರ ಬಗ್ಗೆ ಮಾತಾಡೋದು ಬೇಡ ಎಂದರು.

ಇನ್ನು ರಾಜಕೀಯ ಬೇರೆ ವಿಷಯದಲ್ಲಿ ಮಾಡಲಿ. ಇಂತಹ ವಿಷಯದಲ್ಲಿ ರಾಜಕೀಯ ಮಾಡಬಾರದು. ಜನರನ್ನು ತಪ್ಪು ದಾರಿಗೆ ಎಳೆಯೋದು ಖಂಡನೀಯ. ಇತ್ತೀಚಿನ ದಿನಗಳಲ್ಲಿ ಜಾಸ್ತಿ ಆಗುತ್ತಿದೆ. ಇದು ನೋವಿನ ಸಂಗತಿ, ಇದು ಆಗಬಾರದು ಎಂದು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ