NEWSನಮ್ಮರಾಜ್ಯಬೆಂಗಳೂರು

ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಬಾನು ಮುಷ್ತಾಕ್ ಅವರನ್ನ ಚಾಮುಂಡಿ ಬೆಟ್ಟ ಹತ್ತಬಾರದು ಅಂತಾರೆ. ಪೂಜೆ ಮಾಡಬಾರದು ಅಂತಾರೆ. ನನಗೆ ಅರ್ಥ ಆಗಲ್ಲ. ನಾವು ಜಾತ್ಯಾತೀತ ವ್ಯವಸ್ಥೆಯಲ್ಲಿ ಇದ್ದೇವೆ. ಸಂವಿಧಾನ ಸಮಾನತೆ ಅಂತ ಹೇಳುತ್ತದೆ. ಅಂಬೇಡ್ಕರ್ ಇದನ್ನೇ ಹೇಳುತ್ತಾರೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನ ಸಮಾಜ ಖಂಡಿಸಬೇಕು ಎಂದು ಕಿಡಿಕಾರಿದರು.

ಮಾಜಿ ಲೋಕಸಭೆ ಸದಸ್ಯನಿಗೆ ಸಂವಿಧಾನ ಗೊತ್ತಿಲ್ಲ ಅಂದರೆ ಏನು ಹೇಳಬೇಕು ಅವನನ್ನ? ಮೂರ್ಖ ಅಂತ ಕರೆಯಬೇಕು. ಇಂತಹ ಮೂರ್ಖರು ನಮ್ನ ದೇಶದಲ್ಲಿ ಇದ್ದಾರೆ. ಇಂತಹ ಮೂರ್ಖರ ಬಗ್ಗೆ ಮಾತಾಡೋದು ಬೇಡ ಎಂದರು.

ಇನ್ನು ರಾಜಕೀಯ ಬೇರೆ ವಿಷಯದಲ್ಲಿ ಮಾಡಲಿ. ಇಂತಹ ವಿಷಯದಲ್ಲಿ ರಾಜಕೀಯ ಮಾಡಬಾರದು. ಜನರನ್ನು ತಪ್ಪು ದಾರಿಗೆ ಎಳೆಯೋದು ಖಂಡನೀಯ. ಇತ್ತೀಚಿನ ದಿನಗಳಲ್ಲಿ ಜಾಸ್ತಿ ಆಗುತ್ತಿದೆ. ಇದು ನೋವಿನ ಸಂಗತಿ, ಇದು ಆಗಬಾರದು ಎಂದು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...