NEWSನಮ್ಮರಾಜ್ಯಬೆಂಗಳೂರು

ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಬಾನು ಮುಷ್ತಾಕ್ ಅವರನ್ನ ಚಾಮುಂಡಿ ಬೆಟ್ಟ ಹತ್ತಬಾರದು ಅಂತಾರೆ. ಪೂಜೆ ಮಾಡಬಾರದು ಅಂತಾರೆ. ನನಗೆ ಅರ್ಥ ಆಗಲ್ಲ. ನಾವು ಜಾತ್ಯಾತೀತ ವ್ಯವಸ್ಥೆಯಲ್ಲಿ ಇದ್ದೇವೆ. ಸಂವಿಧಾನ ಸಮಾನತೆ ಅಂತ ಹೇಳುತ್ತದೆ. ಅಂಬೇಡ್ಕರ್ ಇದನ್ನೇ ಹೇಳುತ್ತಾರೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನ ಸಮಾಜ ಖಂಡಿಸಬೇಕು ಎಂದು ಕಿಡಿಕಾರಿದರು.

ಮಾಜಿ ಲೋಕಸಭೆ ಸದಸ್ಯನಿಗೆ ಸಂವಿಧಾನ ಗೊತ್ತಿಲ್ಲ ಅಂದರೆ ಏನು ಹೇಳಬೇಕು ಅವನನ್ನ? ಮೂರ್ಖ ಅಂತ ಕರೆಯಬೇಕು. ಇಂತಹ ಮೂರ್ಖರು ನಮ್ನ ದೇಶದಲ್ಲಿ ಇದ್ದಾರೆ. ಇಂತಹ ಮೂರ್ಖರ ಬಗ್ಗೆ ಮಾತಾಡೋದು ಬೇಡ ಎಂದರು.

ಇನ್ನು ರಾಜಕೀಯ ಬೇರೆ ವಿಷಯದಲ್ಲಿ ಮಾಡಲಿ. ಇಂತಹ ವಿಷಯದಲ್ಲಿ ರಾಜಕೀಯ ಮಾಡಬಾರದು. ಜನರನ್ನು ತಪ್ಪು ದಾರಿಗೆ ಎಳೆಯೋದು ಖಂಡನೀಯ. ಇತ್ತೀಚಿನ ದಿನಗಳಲ್ಲಿ ಜಾಸ್ತಿ ಆಗುತ್ತಿದೆ. ಇದು ನೋವಿನ ಸಂಗತಿ, ಇದು ಆಗಬಾರದು ಎಂದು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!