CRIMENEWSನಮ್ಮಜಿಲ್ಲೆ

KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ

ವಿಜಯಪಥ ಸಮಗ್ರ ಸುದ್ದಿ

ವಿಟ್ಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಹೊಡೆದಿದ್ದು ಅದೃಷ್ಟವಾಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲದೆ ಎಲ್ಲರು ಸುರಕ್ಷಿತವಾಗಿರುವ ಘಟನೆ ಮುಚ್ಚಿರಪದ ಎಂಬಲ್ಲಿ ನಡೆದಿದೆ.

ಆದರೆ, ಈ ಅಪಘಾತದ ನಂತರ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯೆಬಂದ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪ್ರಶಾಂತ್ ಮೇಲೆ ಟಿಪ್ಪರ್ ಚಾಲಕ ಬಿಲಾಲ್ ಎಂಬಾತ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ.

ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡ ಹೋದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೂ ಬಿಲಾಲ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇತ್ತ ಹಲ್ಲೆಯಿಂದ ಗಾಯಗೊಂಡ ಕಂಡಕ್ಟರ್ ಪ್ರಶಾಂತ್ ಅವರನ್ನು, ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಟಿಪ್ಪರ್ ಚಾಲಕ ಅತೀವೇಗವಾಗಿ ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಪಕಳಕುಂಜದಿಂದ ವಿಟ್ಲಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು ಮತ್ತು ಪೆರುವಾಯಿ ಕಡೆ ಟಿಪ್ಪರ್ ಲಾರಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯ ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಈ ಸಂಬಂಧ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ