ಕುಂಬಳೆ: ಖಾಸಗಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ನ ಎಂಟು ಮಂದಿ ಪ್ರಯಾಣಿಕರು ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಶಾಂತಿಪಳ್ಳ ತಿರುವಿನಲ್ಲಿ ಇಂದು ನಡೆದಿದೆ.

ಬುಧವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಕಾಸರಗೋಡು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮುಸ್ಕಾನ, ಕಂಚಿಕಟ್ಟೆಯ ಸುಜಾತ (40), ಸೂರಂಬೈಲು ನಿವಾಸಿ ಹಾಗೂ ಕುಂಜತ್ತೂರು ಶಾಲಾ ಅಧ್ಯಾಪಕಿ ದೀಪ್ತಿ (22) ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇನ್ನು ಕಾರಿನಲ್ಲಿದ್ದ ಆಲಂಪಾಡಿ ನಿವಾಸಿಗಳಾದ ಮಾಲಿಕ್, ತಾಜುದ್ದೀನ್, ಕಬೀರ್ ಮತ್ತು ಸಿದಾನ್ ಎಂಬುವರು ಗಾಯಗೊಂಡಿದ್ದು ಅವರಲ್ಲಿ ಸಿದಾನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬದಿಯಡ್ಕ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕುಂಬಳೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related










