Please assign a menu to the primary menu location under menu

CrimeNEWSದೇಶ-ವಿದೇಶ

ವರುಣನ ಆರ್ಭಟ: ನದಿಗಳಂತಾದ ರಸ್ತೆಗಳು – ಹಲವು ಮನೆಗಳ ಕುಸಿತ

ವಿಜಯಪಥ ಸಮಗ್ರ ಸುದ್ದಿ

ಜಮ್ಮು & ಕಾಶ್ಮೀರ: ವರುಣನ ಆರ್ಭಟಕ್ಕೆ ಎಂಟರಿಂದ ಹತ್ತು ಮನೆಗಳು ಕುಸಿದು ಬಿದ್ದಿರುವ ಘಟನೆ ಜಮ್ಮು & ಕಾಶ್ಮೀರದ ಪೂಂಚ್‌ ಮಂಡಿ ಪ್ರದೇಶದಲ್ಲಿ ಸಂಭವಿಸಿದೆ.

ಭಾರೀ ಮಳೆಯಿಂದಾಗಿ 336 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗಾಗಿ ರಕ್ಷಣಾ ತಂಡ ಹರಸಾಹಸ ಪಡುತ್ತಿದೆ.

ಇನ್ನು ನಿರಂತರ ಮಳೆಗೆ ರಸ್ತೆಗಳೆಲ್ಲವೂ ನದಿಗಳಂತಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇತ್ತ ಹಠಾತ್ ಮಳೆಯಿಂದಾಗಿ ಕುಪ್ವಾರ ಪ್ರದೇಶದಲ್ಲೂ ಕೂಡ ಹಲವು ರಸ್ತೆಗಳು ಕೊಚ್ಚಿಹೋಗಿದ್ದು ಕಟ್ಟಡಗಳು ನೆಲಕ್ಕುರುಳಿ ಬಿದ್ದಿವೆ.

ಈ ಪ್ರದೇಶಗಳಲ್ಲಿ ನಿತ್ಯ ವರುಣ ಆರ್ಭಟಿಸುತ್ತಿದ್ದು, ಇನ್ನೂ ಹಲವು ಮನೆಗಳು ಶಿಥಿಲಾವಸ್ಥೆಯ ಹಂಚಿನಲ್ಲಿವೆ ಎಂದು ರಕ್ಷಣಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಹಾಗೂ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಅನೇಕ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದೆ. ನಿರಂತರ ಮಳೆ ಮತ್ತು ಹಿಮಪಾತದಿಂದಾಗಿ ಹಲವಾರು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ.

ಇನ್ನೂ ಹೆದ್ದಾರಿಯುದ್ದಕ್ಕೂ ಈ ಭೂಕುಸಿತವಾಗಿರುವುದರಿಂದ ಹಲವು ವಾಹನಗಳು ಮಧ್ಯೆ ಸಿಲುಕಿಕೊಂಡಿದ್ದು ವಾಹನಗಳ ಮಾಲೀಕರು ಪರದಾಡುವಂತಾಗಿದೆ.

ಬಂಡೆಗಳು ಮತ್ತು ಮಣ್ಣಿನ ರಾಶಿ ಪರ್ವತದ ಮೇಲಿಂದ ಜಾರಿ ಹೆದ್ದಾರಿಗೆ ಬಿದ್ದಿದೆ. ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಹೆದ್ದಾರಿ ಇದರಿಂದ ಬಂದ್‌ ಆಗಿದೆ. ಇಲ್ಲಿ ಉಂಟಾಗಿರುವ ಭೂ ಕುಸಿತದಿಂದ ಹೆದ್ದಾರಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ