ಉತ್ತರಕಾಶಿ: ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಇಂದು ಮೇ 8ರ ಗುರುವಾರ ಬೆಳಗ್ಗೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಹೆಲಿಕಾಪ್ಟರ್ನಲ್ಲಿ ಐದರಿಂದ ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗಂಗಾನಿಯ ಮುಂದೆ ನಾಗ ದೇವಾಲಯದ ಕೆಳಗೆ ಭಾಗೀರಥಿ ನದಿಯ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ. ಉತ್ತರಕಾಶಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ತೆರಳಿದ್ದಾರೆ. ಆರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್ನಿಂದ ಹರ್ಸಿಲ್ ಹೊರಟಿತ್ತು.
ಇನ್ನು ಖಾಸಗಿ ಕಂಪನಿಗೆ ಸೇರಿದ ಈ ಹೆಲಿಕಾಪ್ಟರ್ ಪತನಗೊಂಡ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಸೇನಾ ಪಡೆಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಮಡಿದ ಮತ್ತು ಗಾಯಗೊಂಡವರ ಹೊರತೆಗೆಯುವ ಕಾರ್ಯ ಮುಂದುವರಿಸಿದ್ದಾರೆ.
ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ ಧಾಮಿ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹೆಲಿಕಾಪ್ಟರ್ ಪತನಗೊಂಡು ಅಸುನೀಗಿದವರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
“ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವುನೋವು ಸಂಭವಿಸಿರುವುದು ತುಂಬಾ ದುಃಖಕರ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್ಡಿಆರ್ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತೆರಳಬೇಕು. ಅಪಘಾತದಲ್ಲಿ ಮೃತಪಟ್ಟವರ ಆತ್ಮಗಳಿಗೆ ದೇವರು ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬಗಳಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಅವರು ಎಕ್ಸ್ ಮಾಡಿದ್ದಾರೆ.
ಅಲ್ಲದೆ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಧಾಮಿ ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾನು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪ್ರತಿಯೊಂದು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...