NEWSನಮ್ಮರಾಜ್ಯಸಿನಿಪಥ

ಹಲೋ ಡ್ಯಾಡಿ ಸಿನಿಮಾದ ಬಾಲನಟ ನಿತಿನ್ ಗೋಪಿ ಹೃದಯಾಘಾತದಿಂದ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾಲ ನಟರಾಗಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಹಾಗೂ ಇತ್ತೀಚೆಗೆ ಹಲವು ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದ ನಿತಿನ್ ಗೋಪಿ (39) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ದಿವಂಗತ ಡಾ.ವಿಷ್ಣುವರ್ಧನ್​ ಅಭಿನಯದ ಹಲೋ ಡ್ಯಾಡಿ ಸಿನಿಮಾದಲ್ಲಿ ಬಾಲ ನಟನಾಗಿ ಪ್ರೇಕ್ಷಕರ ಮನಗೆದಿದ್ದರು. ಕನ್ನಡಿಗರ ಮನೆ ಮಾತಾಗಿದ್ದ ನಟ ಹಾಗೂ ನಿರ್ದೇಶಕ ನಿತಿನ್​ ಗೋಪಿ ಬಾಲನಟನಾಗಿಯೇ ಕನ್ನಡ ಸಿನಿಮಾ ಪ್ರಿಯರಿಗೆ ಹೆಚ್ಚು ಪರಿಚಿತರಾಗಿದ್ದರು.

‘ನಿಶಬ್ಧ’, ‘ಕೆರಳಿದ ಕೇಸರಿ’, ‘ಚಿರಬಾಂದವ್ಯ’, ‘ಮುತ್ತಿನಂಥ ಹೆಂಡತಿ’, ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಿತಿನ್ ಬಾಲನಟನಾಗಿ ನಟಿಸಿದ್ದರು. ಇನ್ನು ‘ಹಲೋ ಡ್ಯಾಡಿ’ ಚಿತ್ರದಲ್ಲಿ ವಿಷ್ಣುವರ್ಧನ್ ಅವರ ಮಗನಾಗಿ ಕಾಣಿಸಿಕೊಂಡಿದ್ದ ನಿತಿನ್, “ಶಾಲೆಗೆ ಈ ದಿನ ರಜಾ” ಹಾಡಿನ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಇಂದಿಗೂ ಉಳಿದುಕೊಂಡಿದ್ದಾರೆ.

ಹೃದಯಾಘಾತ: ಇಟ್ಟಮಡುವಿನ ಅಪಾರ್ಟ್‌ಮೆಂಟ್‌ನಲ್ಲಿದ್ದ ನಿತಿನ್ ಅವರಿಗೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿದೆ. ಆದರೆ ಮಾರ್ಗ ಮಧ್ಯದಲ್ಲೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇನ್ನು ಮುಂಬೈನಲ್ಲಿ ಚಿತ್ರೀಕರಣಗೊಂಡ ‘ಹರ ಹರ ಮಹದೇವ’ ಧಾರಾವಾಹಿಯ ಹಲವು ಸಂಚಿಕೆಗಳನ್ನು ಹಾಗೂ ತಮಿಳು ಧಾರಾವಾಹಿಯೊಂದನ್ನು ನಿರ್ದೇಶಿಸಿದ್ದಾರೆ. ಬಾಲಾಜಿ ಟೆಲಿಫಿಲ್ಮ್ಸ್ ಹಾಗೂ ಶ್ರುತಿ ನಾಯ್ಡು ಅವರ ಕೆಲ ಧಾರಾವಾಹಿಗಳಲ್ಲೂ ಕೆಲಸ ಮಾಡಿದ್ದು, ಹೊಸ ಧಾರಾವಾಹಿಯೊಂದರ ನಿರ್ದೇಶನಕ್ಕೆ ಸಿದ್ಧತೆ ನಡೆಸಿದ್ದರು.

ಕೇವಲ 39ರ ವಯಸ್ಸಿನ ನಿತಿನ್, ಹೊಸ ಧಾರಾವಾಹಿಯನ್ನು ನಿರ್ದೇಶನ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಅಂದಹಾಗೆ ಇವರು ಖ್ಯಾತ ಕೊಳಲು ವಾದ ಗೋಪಿ ಅವರ ಪುತ್ರ. ನಿತಿನ್ ಅಗಲಿಕೆಗೆ ಕಿರುತೆರೆಯ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ