CrimeNEWSದೇಶ-ವಿದೇಶ

ಬೈಕ್‌ಗೆ ಕಾರು ಡಿಕ್ಕಿ ಹೊಡೆಸಿದ ಪುಂಡರು: ಕೇಳಿದ ಬೈಕ್‌ ಸವಾರನ ಕಿಟಕಿಗೆ ಕಟ್ಟಿ 2ಕಿಮೀ ಎಳೆದೊಯ್ದರು

ವಿಜಯಪಥ ಸಮಗ್ರ ಸುದ್ದಿ

ಛತ್ತೀಸ್‌ಗಢ: ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಹೃದಯ ವಿದ್ರಾವಕ ಘಟನೆಯೊಂದು ಛತ್ತೀಸ್‌ಗಢ ನಡೆದಿದೆ.

ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಕಾರಣ ಯುವಕನ ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಕಿಡಿಗೇಡಿಗಳನ್ನು ಕೇಳಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆಸಿದ್ದರಿಂದ ಯುವಕ ಹಾಗೂ ಕಾರು ಸವಾರರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಕೆಲ ಪುಂಡರು ಯುವಕನನ್ನ ಕಾರಿನ ಕಿಟಿಕಿಗೆ ಕಟ್ಟಿ, ಸುಮಾರು 2 ಕಿಲೋ ಮೀಟರ್​ವರೆಗೆ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಜಾಗ್ರತರಾದ ಪೊಲೀಸರು ಕಾರು ಚಾಲಕ ಜಹೀರುದ್ದೀನ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕನನ್ನು ಕಾರಿನಲ್ಲಿ ಎಳದೊಯ್ಯತ್ತಿರುವ ದೃಶ್ಯ ವೈರಲ್​ ಆಗಿದ್ದು, ಅನೇಕರು ಈ ಘಟನೆಯ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ