ಬೆಂಗಳೂರು: ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕ್ಷಮೆ ಕೇಳಲ್ಲವೆಂದು ಉದ್ಧಟತನ ಮೆರೆದಿದ್ದ ನಟ ಕಮಲ್ ಹಾಸನ್ಗೆ ಹೈಕೋರ್ಟ್ ಭಾರೀ ಚಾಟಿ ಬೀಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಅಮೇಲೆ ವಿಚಾರಣೆ ಮಾಡೋಣ ಎಂದು ಹೇಳಿದೆ.
ಥಗ್ ಲೈಫ್ ಸಿನಿಮಾ ಬಿಡುಗಡೆ ನಿರ್ಬಂಧವನ್ನು ತೆರವು ಮಾಡುವಂತೆ ಕಮಲ್ ಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಮೊದಲು ಕನ್ನಡಿಗರ ಕ್ಷಮೆ ಕೇಳಿ. ಆಮೇಲೆ ಅರ್ಜಿ ವಿಚಾರಣೆ ಮಾಡೋಣ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.
ಮೊದಲು ಕನ್ನಡಿಗರ ಕ್ಷಮೆ ಕೇಳಿ, ಆನಂತರ ಅರ್ಜಿ ವಿಚಾರಣೆ ನಡೆಸೋಣ. ಕಮಲ್ ಹಾಸನ್ ಯಾರೇ ಇರಲಿ, ನೆಲ- ಜಲ ವಿಚಾರದಲ್ಲಿ ರಾಜಿ ಇಲ್ಲ ಜತೆಗೆ ಕಮಲ್ ಹಾಸನ್ ಅವರ ಭಾಷಾ ತಜ್ಞರ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಇನ್ನು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ನಾಗ ಪ್ರಸನ್ನ ಅವರಿದ್ದ ಏಕಸದಸ್ಯಪೀಠ ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್ ಹಾಸನ್ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಿ. ನನಗೆ ತಲೆಯಲ್ಲಿ ಬುದ್ಧಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ. ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿಗಳು ಕಮಲ್ ಹಾಸನ್ಗೆ ಮಾತಿನ ಚಾಟಿ ಬೀಸಿದರು.
ಇನ್ನು ಥಗ್ ಲೈಫ್ ಸಿನಿಮಾ ಪ್ರಚಾರದ ವೇಳೆ ಕಮಲ್ ಹಾಸನ್ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿ, ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿಷೇಧದ ಬೆದರಿಕೆ ಹಾಕಿವೆ.
ಇನ್ನು ಇದೇ ಜೂನ್ 5ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು ಅದು ರಾಜ್ಯದಲ್ಲೂ ಪ್ರದರ್ಶನಕ್ಕೆ ಥಿಯೇಟರ್ಗಳು ಕೂಡ ರೆಡಿಯಾಗಿವೆ. ಆದರೆ, ಅವರು ನೀಡಿರುವ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಹೇಳಿಕೆಯಿಂದ ಕರ್ನಾಟಕದ ಮಂದಿಗೆ ಭಾರಿ ನೋವಾಗಿದೆ. ಹೀಗಾಗಿ ಕ್ಷಮೆ ಕೇಳಿ ಎಂದು ಪಟ್ಟುಹಿಡಿದಿದ್ದು ಇದಕ್ಕೆ ನಾನು ತಪ್ಪು ಹೇಳಿಕಲ್ಲ ಹಾಗಾಗಿ ಕ್ಷಮೆ ಕೇಳೊಲ್ಲ ಎಂದು ಉದ್ಧಟತನ ಮೆರೆಯುತ್ತಿದ್ದಾರೆ ಕಮಲಹಾಸನ್.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...