ಬೆಂಗಳೂರು: ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕ್ಷಮೆ ಕೇಳಲ್ಲವೆಂದು ಉದ್ಧಟತನ ಮೆರೆದಿದ್ದ ನಟ ಕಮಲ್ ಹಾಸನ್ಗೆ ಹೈಕೋರ್ಟ್ ಭಾರೀ ಚಾಟಿ ಬೀಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಅಮೇಲೆ ವಿಚಾರಣೆ ಮಾಡೋಣ ಎಂದು ಹೇಳಿದೆ.
ಥಗ್ ಲೈಫ್ ಸಿನಿಮಾ ಬಿಡುಗಡೆ ನಿರ್ಬಂಧವನ್ನು ತೆರವು ಮಾಡುವಂತೆ ಕಮಲ್ ಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಮೊದಲು ಕನ್ನಡಿಗರ ಕ್ಷಮೆ ಕೇಳಿ. ಆಮೇಲೆ ಅರ್ಜಿ ವಿಚಾರಣೆ ಮಾಡೋಣ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.
ಮೊದಲು ಕನ್ನಡಿಗರ ಕ್ಷಮೆ ಕೇಳಿ, ಆನಂತರ ಅರ್ಜಿ ವಿಚಾರಣೆ ನಡೆಸೋಣ. ಕಮಲ್ ಹಾಸನ್ ಯಾರೇ ಇರಲಿ, ನೆಲ- ಜಲ ವಿಚಾರದಲ್ಲಿ ರಾಜಿ ಇಲ್ಲ ಜತೆಗೆ ಕಮಲ್ ಹಾಸನ್ ಅವರ ಭಾಷಾ ತಜ್ಞರ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಇನ್ನು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ನಾಗ ಪ್ರಸನ್ನ ಅವರಿದ್ದ ಏಕಸದಸ್ಯಪೀಠ ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್ ಹಾಸನ್ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಿ. ನನಗೆ ತಲೆಯಲ್ಲಿ ಬುದ್ಧಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ. ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿಗಳು ಕಮಲ್ ಹಾಸನ್ಗೆ ಮಾತಿನ ಚಾಟಿ ಬೀಸಿದರು.
ಇನ್ನು ಥಗ್ ಲೈಫ್ ಸಿನಿಮಾ ಪ್ರಚಾರದ ವೇಳೆ ಕಮಲ್ ಹಾಸನ್ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿ, ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿಷೇಧದ ಬೆದರಿಕೆ ಹಾಕಿವೆ.
ಇನ್ನು ಇದೇ ಜೂನ್ 5ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು ಅದು ರಾಜ್ಯದಲ್ಲೂ ಪ್ರದರ್ಶನಕ್ಕೆ ಥಿಯೇಟರ್ಗಳು ಕೂಡ ರೆಡಿಯಾಗಿವೆ. ಆದರೆ, ಅವರು ನೀಡಿರುವ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಹೇಳಿಕೆಯಿಂದ ಕರ್ನಾಟಕದ ಮಂದಿಗೆ ಭಾರಿ ನೋವಾಗಿದೆ. ಹೀಗಾಗಿ ಕ್ಷಮೆ ಕೇಳಿ ಎಂದು ಪಟ್ಟುಹಿಡಿದಿದ್ದು ಇದಕ್ಕೆ ನಾನು ತಪ್ಪು ಹೇಳಿಕಲ್ಲ ಹಾಗಾಗಿ ಕ್ಷಮೆ ಕೇಳೊಲ್ಲ ಎಂದು ಉದ್ಧಟತನ ಮೆರೆಯುತ್ತಿದ್ದಾರೆ ಕಮಲಹಾಸನ್.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...