ಜಂಟಿ ಕ್ರಿಯಾ ಸಮಿತಿಗೆ ಶಾಕ್: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್ ತಡೆ
ಇದೇ ಮೇ 20ರಿಂದ ಅಂದರೆ ನಾಳೆಯಿಂದ ಸಾರಿಗೆ ನೌಕರರ ಪರವಾಗಿ ಜಂ ಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇನ್ನೂ ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದ್ದು, ಮುಷ್ಕರವನ್ನು ನಡೆಸದಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ (ಬುಧವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಇದೀಗ ಹೈ ಕೋರ್ಟ್ ಮುಷ್ಕರಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಇದೇ ಮೇ 20ರಿಂದ ಅಂದರೆ ನಾಳೆಯಿಂದ ಸಾರಿಗೆ ನೌಕರರ ಪರವಾಗಿ ಜಂ ಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇನ್ನೂ ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದ್ದು, ಮುಷ್ಕರವನ್ನು ನಡೆಸದಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಜತೆಗೆ 26 ತಿಂಗಳ ಹಿಂಬಾಕಿಯನ್ನೂ ನೀಡಲಾಗಿದೆ. ಆದರೆ, ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನ ಕಾನೂನು ಬದ್ಧವಾಗಿ ನಮ್ಮ ಕೈ ಸೇರಿಲ್ಲ ಅಂತ ಅಸಮಾಧಾನಗೊಂಡಿರುವ ನೌಕರರ ನ್ಯಾಯಬದ್ಧವಾಗಿ ಬರಬೇಕಿರುವುದನ್ನು ನಮಗೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
ಆದರೆ, ನಮಗೆ 38 ತಿಂಗಳ ಬಾಕಿ ವೇತನ ಬರಬೇಕು, ಈಗ ಆಗಿರುವ ವೇತನ ಪರಿಷ್ಕರಣೆಯಿಂದ ನಮಗೆ ಅನ್ಯಾಯವಾಗಿದೆ ಇದನ್ನು ಸರಿಪಡಿಸಿಕೊಡಿ ಎಂದು ಸಾರಿಗೆ ನೌಕರರ ಸಂಘಟನೆಗಳು ಪಟ್ಟು ಹಿಡಿದಿವೆ.
ಸರ್ಕಾರ ಹಾಗೂ ಸಾರಿಗೆ ನೌಕರರ ಸಂಘಟನೆ ಜತೆಗೆ ಹೀಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಹಿಂಬಾಕಿ ವೇತನ ಹಾಗೂ ವೇತನ ಪರಿಷ್ಕರಣೆಯಲ್ಲಿ ಆಗಿರುವ ದೋಷ ಸರಿಪಡಿಸಲು ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ. ವೇತನ ಪರಿಷ್ಕರಣೆ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡಲು ನಿರ್ಧರಿಸಿದ್ದರು.
ಆದರೆ, ಇಂದು ಮುಷ್ಕರ ಮಾಡದಂತೆ ಹೈ ಕೋರ್ಟ್ ತಡೆ ನೀಡಿದ್ದು, ನಾಳೆ ಸಾರಿಗೆ ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
Related









