ಹಿರಿಯೂರು: ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ ಪ್ರಯುಕ್ತ ಮುಂಗಡವಾಗಿ ಸಾರಿಗೆ ನೌಕರರ ಸನ್ಮಾನಿಸಿದ ಶಿಕ್ಷಕರು

ಹಿರಿಯೂರು: 2025ರ ಮೇ 1ರಂದು ಬರುವ ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ದ ಅಂಗವಾಗಿ ಇಂದು ಕೆಎಸ್ಆರ್ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರನ್ನು ಪ್ರತಿ ದಿನ ಬಸ್ನಲ್ಲಿ ಪ್ರಯಾಣಿಸುವ ಶಿಕ್ಷಕರು ಹಿರಿಯೂರು ಬಸ್ ನಿಲ್ದಾಣದಲ್ಲಿ ಶಾಲು ಹೂವಿನ ಹಾರಹಾಕಿ ಸನ್ಮಾನಿಸುವ ಮೂಲಕ ಗೌರವಿಸಿದರ.
ಕಠಿಣ ಪರಿಶ್ರಮ ನಿಮ್ಮನ್ನು ಎಂದಿಗೂ ಸೋಲುವುದಕ್ಕೆ ಬಿಡುವುದಿಲ್ಲ. ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ ದಿನ ಇದಾಗಿದೆ. ಒಬ್ಬ ಕಾರ್ಮಿಕ ಪ್ರತಿ ರಾಷ್ಟ್ರಕ್ಕೂ ದೊಡ್ಡ ಆಸ್ತಿ ಮತ್ತು ಅದ್ಭುತಗಳ ನಿರ್ಮಾತೃ.
ದುಡಿಮೆ ಮನುಷ್ಯನ ಘನತೆ ಮತ್ತು ಸೃಜನಶೀಲತೆಯನ್ನು ವ್ಯಕ್ತಪಡಿಸುವ ಏಣಿ. ಜೀವನದ ಕಠಿಣ ಸವಾಲುಗಳನ್ನು ಮೆಟ್ಟಿ ನಿಂತು ಶ್ರಮದಲ್ಲಿಯೇ ಬದುಕಿನ ಖುಷಿ ಕಾಣುವ ಎಲ್ಲ ಸಾರಿಗೆ ನೌಕರರಿಗೂ ನಿಮ್ಮ ದಿನದ ಶುಭಾಶಯಗಳು ಎಂದು ಮುಂಗಡವಾಗಿ ಶಿಕ್ಷಕರು ಶುಭಾಶಯಕೋರಿದರು.
ಇನ್ನು ಶ್ರಮಜೀವಿಗಳ ಕೆಲಸವನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸುವ ಸಲುವಾಗಿ ಮೇ 1ರಂದು ಜಾಗತಿಕವಾಗಿ ‘ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಮೇ ಡೇ, ಲೇಬರ್ ಡೇ ಹಾಗೂ ವರ್ಕರ್ಸ್ ಡೇ ಎಂತಲೂ ಕರೆಯಲಾಗುತ್ತದೆ. ಕಾರ್ಮಿಕ ವರ್ಗದ ಶ್ರಮ ಮತ್ತು ಸಮರ್ಪಣೆಯನ್ನು ಗುರುತಿಸುವುದು, ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೋಷಣೆಯಿಂದ ರಕ್ಷಿಸುವುದು ಕಾರ್ಮಿಕ ದಿನದ ಉದ್ದೇಶವಾಗಿದೆ ಎಂದು ಇದೇ ವೇಳೆ ಶಿಕ್ಷಕರು ತಿಳಿಸಿದ್ದಾರೆ.
ಇನ್ನು ಇದನ್ನು 1886ರಲ್ಲಿ ಅಮೆರಿಕದಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ದಿನಕ್ಕೆ ಕಾರ್ಮಿಕರಿಗೆ 8 ಗಂಟೆ ಕೆಲಸದ ಅವಧಿಯನ್ನು ನಿಗದಿ ಮಾಡಬೇಕು ಎಂಬ ಆಗ್ರಹದೊಂದಿಗೆ ಶುರುವಾದ ಚಳವಳಿಗೆ ಯಶಸ್ಸು ಸಿಕ್ಕಿತ್ತು. ಇದೇ ಹೋರಾಟದ ಕಿಚ್ಚಿನಲ್ಲಿ ಉದಯಿಸಿದ್ದೇ ಕಾರ್ಮಿಕರ ದಿನಾಚರಣೆ. ಭಾರತದಲ್ಲಿ ಈ ಆಚರಣೆ ಆರಂಭವಾಗಿದ್ದು 1923ರಲ್ಲಿ. ವಿಶ್ವದ ನಾನಾ ಭಾಗಗಳಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸುವ ಮೂಲಕ ಶ್ರಮಜೀವಿಗಳಿಗೆ ಕೃತಜ್ಞತೆ ಸಲ್ಲಿಸಲಾಗುತ್ತದೆ.
ಮೇ 1 ರಂದು ಸಮಾಜಕ್ಕಾಗಿ ಕಾರ್ಮಿಕರ ಕೊಡುಗೆ ಹಾಗೂ ತ್ಯಾಗವನ್ನು ಸ್ಮರಿಸಲಾಗುತ್ತದೆ. ಭಾರತದಲ್ಲಿ ಇದನ್ನು ‘ಮೇ ದಿನ’ ಎಂದು ಕರೆಯುತ್ತಾರೆ. ದೇಶದಲ್ಲಿ ಮೊದಲ ಕಾರ್ಮಿಕ ದಿನವನ್ನು ಮೇ 1, 1923 ರಂದು ಮದ್ರಾಸಿನಲ್ಲಿ ಆಚರಿಸಲಾಯಿತು. ಇದನ್ನು ಕಾಮ್ರೇಡ್ ಸಿಂಗರವೇಲರ್ ನೇತೃತ್ವದ ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆರಂಭಿಸಿತ್ತು. ಅಂದಿನಿಂದ ಈವರೆಗೆ ಭಾರತದಲ್ಲಿ ಕಾರ್ಮಿಕರ ದಿನವನ್ನು ಆಚರಿಸಲಾಗುತ್ತಿದೆ ಮತ್ತು ರಾಷ್ಟ್ರೀಯ ರಜೆ ಘೋಷಿಸಲಾಗಿದೆ. ಇದು 141ನೇ ವರ್ಷದ ಅಂತಾರಾಷ್ಟ್ರೀಯ ಕಾರ್ಮಿಕರ ದಿನವಾಗಿದೆ.
ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಲ್ಲಿ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಉದಾಹರಣೆಗೆ ಹಿಂದಿಯಲ್ಲಿ ‘ಅಂತಾರಾಷ್ಟ್ರೀಯ ಶ್ರಮಿಕ್ ದಿವಸ್’, ಕಾರ್ಮಿಕ ದಿನಚರಣೆ (ಕನ್ನಡ), ಕಾರ್ಮಿಕ ದಿನೋತ್ಸವಮ್ (ತೆಲುಗು), ಕಮ್ಗರ್ ದಿವಸ್ (ಮರಾಠಿ), ಉಜೈಪಾಲರ್ ದೀನಂ (ತಮಿಳು), ತೊಝಿಲಾಲಿ ದಿನಂ (ಮಲಯಾಳಂ), ಮತ್ತು ಶ್ರೋಮಿಕ್ ದಿಬೋಶ್ (ಬಂಗಾಳಿ) ಎಂದು ಕರೆಯುತ್ತಾರೆ.
ಕಾರ್ಮಿಕ ದಿನದ ಇತಿಹಾಸ: ಅಮೆರಿಕದ ಕಾರ್ಮಿಕರು, ಕಠೋರ ಕಾರ್ಮಿಕ ನಿಯಮ, ಕಾರ್ಮಿಕರ ಹಕ್ಕುಗಳ ಉಲ್ಲಂಘನೆ ಮತ್ತು ಭಯಾನಕ ಕೆಲಸದ ವೇಳೆಯ ವಿರುದ್ಧ ಪ್ರತಿಭಟನೆ ಆರಂಭಿಸಿದರು. ದಿನಕ್ಕೆ 8 ಗಂಟೆ ಕೆಲಸ ನಿಗದಿಗೊಳಿಸಬೇಕೆಂಬ ಈ ಚಳವಳಿ 1860ರಿಂದ ಆರಂಭವಾಯಿತು. ಚಳವಳಿಗಾಗಿ ಅಮೆರಿಕ ಹಾಗೂ ಕೆನಡಾದಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಅಸ್ತಿತ್ವಕ್ಕೆ ಬಂದವು.
ದಿನಕ್ಕೆ 10 ರಿಂದ 14 ಗಂಟೆಗಳ ಕಾಲ ಬಲವಂತವಾಗಿ ದುಡಿಸಿಕೊಳ್ಳುವುಕ್ಕೆ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ಶಿಕಾಗೋ ನಗರ ಸಾವಿರಾರು ಕಾರ್ಮಿಕ ಸಂಘಟನೆಗಳ ಕೇಂದ್ರವಾಗಿ ಮಾರ್ಪಟ್ಟಿತು. 1886 ಮೇ 1 ಕಾರ್ಮಿಕ ಹೋರಾಟದ ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟ. ಲಕ್ಷಾಂತರ ಮಂದಿ ಕಾರ್ಮಿಕರು 8 ಗಂಟೆಗಳ ಕೆಲಸದ ನಿಗದಿಗೆ ಪ್ರತಿಭಟನೆ ಪ್ರಾರಂಭಿಸಿದ್ದರು.
ಈ ಹೋರಾಟದಲ್ಲಿ ಎಷ್ಟೋ ಕಾರ್ಮಿಕರು ಪ್ರಾಣ ತ್ಯಾಗ ಮಾಡಬೇಕಾಯಿತು. ಹೀಗಾಗಿ 1916 ರವರೆಗೂ ಅಮೆರಿಕ 8 ಗಂಟೆಗಳ ಕೆಲಸ ಸಮಯವನ್ನು ನಿಗದಿಗೊಳಿಸಿತು. ಕಾರ್ಮಿಕ ಹೋರಾಟಕ್ಕೆ ಸಿಕ್ಕ ಯಶಸ್ಸಿನ ನೆನಪಿಗಾಗಿ ಹಾಗೂ ಮೃತ ಕಾರ್ಮಿಕರ ಗೌರವಾರ್ಥವಾಗಿ ಮೇ 1 ರಂದು ಕಾರ್ಮಿಕರ ದಿನವಾಗಿ ಆಚರಿಸಲಾಗುತ್ತಿದೆ. ಈ ಬಲಿದಾನಗಳ ಫಲವಾಗಿ ಕೆಲಸದ ಅವಧಿ ಇಂದು ವಿಶ್ವದ ಅನೇಕ ದೇಶಗಳಲ್ಲಿ 8 ಗಂಟೆಗಳಿಗೆ ಮಿತಿಗೊಂಡಿದೆ.
Related

You Might Also Like
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...