NEWSಕೃಷಿನಮ್ಮರಾಜ್ಯ

ಬೇಸಿಗೆಯ ಬಿರು ಬಿಸಿಲು- ತಂಪೆರೆದ ಭರಣಿ ಮಳೆ: ರೈತರ ಮುಖದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೇಸಿಗೆಯ ಬಿರು ಬೇಸಿಲಿನ ಧಗೆಯಿಂದ ಬಸವಳಿದಿದ್ದ ಜನ, ಜಾನುವಾರುಗಳಿಗೆ ಶುಕ್ರವಾರ ಸಂಜೆ ಸುರಿದ ಸುರಿದ ಮಳೆ ತಂಪೆರೆದಿದೆ.

ಕಳೆದ ಐದಾರು ತಿಂಗಳಿಂದ ಬೇಸಿಗೆಯ ರಣ ಬಿಸಿಲು ಹಾಗೂ ಬರಗಾಲದಿಂದ ತತ್ತರಿಸಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಏಪ್ರಿಲ್‌ 27 ರಂದು ಭರಣಿ ಮಳೆ ಹುಟ್ಟಿದ್ದು ರಾಜ್ಯದ ಹಲವೆಡೆ ಬಿಸಿಲ ಬೇಗೆಯಿಂದ ಬಸವಳಿದವರಿಗೆ ರಿಲೀಫ್‌ ನೀಡಿದೆ.

ಭರಣಿ ಮಳೆ ಭೂಮಿಗೆ ಬಿದ್ದರೆ ಪಿರಿಯಾಪಟ್ಟಣ ರೈತರು ತಮ್ಮ ಭೂಮಿಯನ್ನು ಹದ ಮಾಡಿಕೊಂಡು ತಂಬಾಕು ಹಾಗೂ ಮುಸುಕಿನ ಜೋಳದ ಬಿತ್ತನೆ ಕಾರ್ಯ ಹಾಗೂ ನಾಟಿ ಕೆಲಸ ಆರಂಭಿಸುತ್ತಾರೆ. ಅದೇರೀತಿ ಜಿಲ್ಲೆಯಲ್ಲಿ ಮಂದಿ ಹಲಸಂದೆ, ಜೋಳವನ್ನು ಬಿತ್ತನೆ ಮಾಡಲು ಸಿದ್ಧರಾಗುತ್ತಿದ್ದಾರೆ.

ಕಳೆದ ವರ್ಷ ಬರಗಾಲ ತಲೆದೋರಿದ ಪರಿಣಾಮ ತಾಲೂಕಿನಲ್ಲಿ ಐದಾರು ತಿಂಗಳಿಂದ ಬೇಸಿಗೆಯ ರಣ ಬಿಸಿಲು ಹೆಚ್ಚಾಗಿ ದಾಖಲೆಯ ಉಷ್ಣಾಂಶ ಎದುರಾಗಿ ಜನ ಜಾನುವಾರುಗಳು ಕುಡಿಯಲು ನೀರಿಲ್ಲದೆ ಕೆರೆಕಟ್ಟೆಗಳು ಒಣಗಿ ಹೋಗಿ, ಬೋರ್ವೆಲ್‌ಗಳು ಬತ್ತಿ ಹೋಗಿ ತೋಟ ತುಡಿಕೆಗಳು ಒಣಗಿ ಹೋಗಿ ರೈತರನ್ನು ಸಂಕಷ್ಟಕ್ಕೆ ತಳ್ಳಿವೆ.

ಆದರೆ ಶುಕ್ರವಾರ ಸಂಜೆ ಸುರಿದ ಭರಣಿ ಮಳೆಗೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಪಿರಿಯಾಪಟ್ಟಣ ಪಟ್ಟಣದ ಬಹುಭಾಗ ಸೇರಿದಂತೆ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.

ರಭಸದ ಗಾಳಿ ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಸೇರಿದಂತೆ ಮರಗಳು ಧರೆಗುರುಳಿವೆ. ಕಳೆದ ಒಂದು ವಾರದಿಂದ ಪಿರಿಯಾಪಟ್ಟಣದಲ್ಲಿ ಉಷ್ಣಾಂಶ 37 ರಿಂದ 38 ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗಿತ್ತು. ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ಮಳೆ ಬಂದರೂ ನೆನೆದುಕೊಂಡೆ ಜನ ಪ್ರಯಾಣಿಸಿದ ದೃಶ್ಯಗಳು ಕಂಡು ಬಂದವು.

ಸುರಿದ ಭರಣಿ ಮಳೆ ಕೃಷಿಕರಲ್ಲಿ ಉತ್ತಮ ಬೆಳೆ ಪಡೆಯುವ ಭರವಸೆ ಮೂಡಿಸಿವೆ. ರೈತರು ಮುಂಗಾರು ಉಳುಮೆ ಮತ್ತು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆಯೂ ರೈತರಿಗೆ ರಿಯಾಯಿತಿ ದರದಲ್ಲಿ ಮುಸುಕಿನ ಜೋಳ ಸೇರಿದಂತೆ ದ್ವಿದಳ ಧಾನ್ಯಗಳು ಮತ್ತು ಬಿತ್ತನೆ ಬೀಜಗಳನ್ನು ಹಾಗೂ ರಸಗೊಬ್ಬರವನ್ನು ಪೂರೈಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಪಿರಿಯಾಪಟ್ಟಣ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ತಿಳಿಸಿದ್ದಾರೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?