Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ ಬೆಲೆ 100 ರೂ. ಇಳಿಕೆಯೊಂದಿಗೆ ಈಗ ₹805 ರೂ.

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ನೂರು ರೂಪಾಯಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾದ ಇಂದು ನಾರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಉಜ್ವಲಾ ಯೋಜನೆಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಸರ್ಕಾರ 300 ರೂ. ಸಬ್ಸಿಡಿ ನೀಡುತ್ತಿದೆ. ಈ ಸಬ್ಸಿಡಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸಿ ಮುಂದಿನ ಒಂದು ವರ್ಷದವರೆಗೆ ವಿಸ್ತರಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಾದ ಒಂದು ದಿನದ ಬಳಿಕ 100‌ ಕಡಿಮೆ ಮಾಡಿರುವುದಾಗಿ ಘೋಷಿಸಿದ್ದಾರೆ.

ತಮ್ಮ ‘ಎಕ್ಸ್‌’ ಖಾತೆಯಲ್ಲಿ ಈ ಬಗ್ಗೆ ಫೋಸ್ಟ್‌ ಹಾಕಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, “ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವಾಗಲಿದೆ,” ಎಂದು ತಿಳಿಸಿದ್ದಾರೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳಿಗೆ ಆರ್ಥಿಕ ಬೆಂಬಲ ನೀಡುವ ಹಾಗೂ ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರ ಜೀವನವನ್ನು ಸುಲಭಗೊಳಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಗ್ಯಾಸ್‌ ಸಬ್ಸಿಡಿಯನ್ನು ಜಾರಿಗೊಳಿಸಿತ್ತು. ಇದರ ಅಡಿಯಲ್ಲಿ ಸಾಮಾನ್ಯ ಗ್ರಾಹಕರಿಗೆ 200 ರೂ. ಹಾಗೂ ಉಜ್ವಲಾ ಗ್ರಾಹಕರಿಗೆ ಹೆಚ್ಚುವರಿ 300 ರೂ. ಸೇರಿ ಒಟ್ಟು 500 ರೂ. ಸಬ್ಸಿಡಿ ಜಾರಿಗೊಳಿಸಿತ್ತು. ಇದು ಮಾರ್ಚ್ 31ರವರೆಗೆ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ದರ ಎಷ್ಟಿದೆ?: ಸದ್ಯ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್‌ಗೆ 905.50 ರೂ. ದರ ಇದೆ. ಇದು ಸಾಮಾನ್ಯ ಗ್ರಾಹಕರಿಗೆ ಅನ್ವಯವಾಗುವ ದರವಾಗಿದೆ. ಶುಕ್ರವಾರದ 100 ರೂ. ಕಡಿತದ ಘೋಷಣೆ ಬಳಿಕ ಇದೀಗ ದರ 805.50 ರೂ.ಗೆ ಇಳಿಕೆಯಾಗಲಿದೆ.

ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಹೆಚ್ಚುವರಿ 300 ರೂ. ಸಬ್ಸಿಡಿ ಇದ್ದು, ಇವರಿಗೆ 505.50 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ಲಭ್ಯವಾಗಲಿದೆ. 300 ರೂ. ಸಬ್ಸಿಡಿ ಮೊತ್ತ ನೇವಾಗಿ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ