ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ

ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಬೇಕು ಎಂದು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಕರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಬೆಂಗಳೂರು ಕೊಳಚೆ ನರ್ಮೂಲನ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅವರನ್ನು ಭೇಟಿಮಾಡಿ ಮನವಿ ಮಾಡಿತು.
ನೌಕರರು ಹುಬ್ಬಳ್ಳಿಯ ಮನೆಯಲ್ಲಿ ಭೇಟಿಯಾದ ವೇಳೆ ಪ್ರಸಾದ ಅಬ್ಬಯ್ಯನವರು ಮಾತನಾಡಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಗಮನಕ್ಕೆ ತರುವುದಾಗಿಯೂ ಹಾಗೂ ಮುಂಬರುವ ದಿನದಲ್ಲಿ ನಮ್ಮ ನಿಯೋಗವನ್ನು ಮುಖ್ಯಮಂತ್ರಿ ಬಳಿಗೆ ಕರೆದುಕೊಂಡು ಹೋಗಿ ಭೇಟಿ ಮಾಡಿಸುವ ಮೂಲಕ ಬೇಡಿಕೆ ಈಡೇರಿಸುವುದಕ್ಕೆ ಆದ್ಯತೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ಸಚಿವ ಸಂತೋಷ ಲಾಡ್ ಅವರು ಕೂಡ ತಮ್ಮ ಮನೆಯಲ್ಲಿ ಜ.12ರಂದು ಭೇಟಿ ಮಾಡಿದ ನೌಕರರ ಉದ್ದೇಶಿಸಿ ಮಾತನಾಡಿ, ಸರಿ ಸಮಾನ ವೇತನ ಕೊಡುವತ್ತ ನಾವು ಇದ್ದೇವೆ ಎಂದು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಅಲ್ಲದೆ ಸ್ವತಃ “ನಗದು ರಹಿತ ಚಿಕಿತ್ಸೆ” ಯೋಜನೆಯನ್ನು ಶೀಘ್ರವಾಗಿ ನಮ್ಮ ವಾಯವ್ಯ ರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಾರಿ ತರುವುದಾಗಿ ಭರವಸೆ ನೀಡಿದರು ಎಂದು ವಾಯುವ್ಯ ವಲಯ ಮಟ್ಟದ ನೌಕರರ ಕೂಟದ ಕರ್ಯಾಧ್ಯಕ್ಷ ವಿ.ಜಿ.ಪೂಜಾರ ತಿಳಿಸಿದ್ದಾರೆ.
ಮನವಿ ಸಲ್ಲಿಸಿದ ಕೂಟ ಬೇಡಿಕೆಗಳು ಏನು?: ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು ಸರಿಸುಮಾರು 1.15 ಲಕ್ಷ (ಒಂದು ಲಕ್ಷ ಹದಿನೈದು ಸಾವಿರ) ನೌಕರರು ಕರ್ತವ್ಯ ನಿರ್ವಾಹಿಸುತ್ತಿದ್ದು. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರಲು ಆಗದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದೆ.
ಹೀಗಿದ್ದರೂ ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಕೆ ಮಾಡಿದರೆ ಸಿಗುವ ವೇತನ ಅತೀ ಕಡಿಮೆ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಆದರು ನಾವು ಕಾಯ-ವಾಚ -ಮನಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಪ್ರಶಸ್ತಿಗಳು ಒಲಿದು ಬಂದಿರುವುದು.
ಕಳೆದ 40 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಪ್ರತಿ ನಾಲ್ಕು ವರ್ಷಕ್ಕೆ ಒಮ್ಮೆ ನಡೆಯುತ್ತಿರುವ ಅವೈಜ್ಞಾನಿಕ ವೇತನ ಪರಿಷ್ಕರಣೆಯಿಂದ ಬೇಸತ್ತ ಸಾರಿಗೆ ನೌಕರರು ಬುದ್ದ-ಬಸವಣ್ಣ-ಅಂಬೇಡ್ಕರ್ ವಿಚಾರದಂತೆ ಸಂವಿಧಾನ ಅಡಿಯಲ್ಲಿ ಬರುವ ಸಮಾನ ಕೆಲಸಕ್ಕೆ, ಸಮಾನ ವೇತನ ಮತ್ತು ಸೌಲಭ್ಯಗಳಿಗಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ ಹೋರಾಟ ಮಾಡಿದ ಸಂದರ್ಭದಲ್ಲಿ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸುವ ಬದಲು ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಗುಬ್ಬಿಯ ಮೇಲೆ ಬ್ರಹ್ಮಾಸ್ತç ಉಪಯೋಗಿಸುವಂತೆ ಸಾವಿರಾರು ನೌಕರರನ್ನು ವಜಾ, ವರ್ಗಾವಣೆ ಮತ್ತು ಅಮಾನತ್ತು ಮಾಡಿ ಹೋರಾಟವನ್ನು ಹತ್ತಿಕ್ಕಲಾಯಿತ್ತು.
ಅದರೂ ನಾವು ಸಾರಿಗೆ ನೌಕರರು ಎದೆಗುಂದದೆ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು. ಅವರ ಅಧಿಕಾರವಧಿ ಮುಗಿದ ತಕ್ಷಣ ಯಾವಾಗ ಕಾಂಗ್ರೆಸ್ ಪಕ್ಷ ಸಾರಿಗೆ ನೌಕರರಿಗೆ, ಸರ್ಕಾರಿ ನೌಕರರಿಗೆ ಇರುವ ಸರಿಸಮಾನ ವೇತನ ಮತ್ತು ಸೌಲಭ್ಯಗಳನ್ನು ನೀಡುವ ಪ್ರಣಾಳಿಕೆ ಭರವಸೆಯನ್ನು ನೀಡಿದಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಹಲವು ವರ್ಷಗಳ ನ್ಯಾಯಯುತ ಬೇಡಿಕೆಗಳು ಈಡೇರುವ ಭರವಸೆಯಿಂದ ನಾವು ನಮ್ಮ ಕುಟುಂಬ ಸದಸ್ಯರು, ಬಂಧು ಬಳಗ ಮತ್ತು ಕರ್ತವ್ಯ ಸಮಯದಲ್ಲಿ ಪ್ರಯಾಣಿಕರಿಗೂ ಸಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿಸಿ ಸಾರಿಗೆ ನೌಕರರು ಮಾಡಿದ ಅಳಿಲು ಪ್ರಯತ್ನದಿಂದ ನಮ್ಮೆಲ್ಲರ ಮಹಾದಾಸೆಯಂತೆ ಪಕ್ಷ ಅಧಿಕಾರಕ್ಕೆ ಬಂದಾಗ ಸಾರಿಗೆ ನೌಕರರು ಪಟ್ಟ ಖುಷಿಗೆ ಮಿತಿಯೇ ಇರಲಿಲ್ಲ.
ಅರ್ಥಿಕ ಅಧಃಪತನಕ್ಕೆ ಹೋಗಿದ್ದ ಸಾರಿಗೆ ನಿಗಮಗಳನ್ನು ಅರ್ಥಿಕವಾಗಿ ಸದೃಢ ಮಾಡಲು ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನೀಡುವ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಾಕಷ್ಟು ಬಸ್ಸುಗಳ ಮತ್ತು ನೌಕರರ ಕೊರತೆ ಇದ್ದರೂ ಸಾರಿಗೆ ನೌಕರರು ಕಷ್ಟವಾದರು, ಇಷ್ಟ ಪಟ್ಟು ದುಡಿದ ಪರಿಣಾಮ ಈ ದಿನ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಗ್ಯಾರಂಟಿ ಯೋಜನೆ ಎಂದರೆ ಶಕ್ತಿ ಯೋಜನೆ ಎಂದರೆ ಸುಳ್ಳಾಗಲಾರದು.
ಆದ್ದರಿಂದ ಕಳೆದ ಬಾರಿ ತಮ್ಮ ಸರ್ಕಾರ ನೀಡಿದ ಪ್ರಣಾಳಿಕೆ ಭರವಸೆಯಲ್ಲಿ 97/100 ರಷ್ಟು ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದ್ದು, ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ನೌಕರರ ಮತ್ತು ಅಧಿಕಾರಿಗಳ ಬೇಡಿಕೆಯಂತೆ ಹಾಗೂ ಸರ್ಕಾರದ ಪ್ರಣಾಳಿಕೆ ಭರವಸೆಯಂತೆ ಈ ಬಾರಿ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ ನೀಡಬೇಕು, ಈ ಮೂಲಕ ಸಾರಿಗೆ ಸಂಸ್ಥೆಯಲ್ಲಿ ಒಂದು ಇತಿಹಾಸ ನಿರ್ಮಾಣ ಮಾಡಬೇಕು ಎಂದು ತಾವು ಮುಖ್ಯ ಮಂತ್ರಿಗಳಿಗೆ ಹಾಗೂ ಸಾರಿಗೆ ಸಚಿವರಿಗೆ ನಮ್ಮ ಪರವಾಗಿ ಪತ್ರ ಬರೆದು, ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕೋರಬೇಕೆಂದು ಸಮಸ್ತ ಸಾರಿಗೆ ನೌಕರರ ಪರವಾಗಿ ವಿನಂತಿಸುತ್ತೇವೆ ಎಂದು ಮನವಿ ಮಾಡಿದರು.
ಮನವಿ ಸಲ್ಲಿಸುವ ವೇಳೆ ಗ್ರಾಮಾಂತರ ವಿಭಾಗದ ಅಧ್ಯಕ್ಷ ವಿನಾಯಕ ಕಲ್ಲಣ್ಣವರ್, ಉಪಾಧ್ಯಕ್ಷ R.S.ಮಾವಿನಕಾಯಿ, ಖಜಾಂಚಿಗಳಾದ ಮಂಜುನಾಥ ಮಡಿವಾಳರ, ರಿಯಾಝ್, ವಿನಾಯಕ ಡೊಂಬರ, M1 ಘಟಕದ ಅಧ್ಯಕ್ಷ ವೀರಯ್ಯ ಕರಣ್ಣವರ, ರಾಜೂರ, ಪ್ರಾದೇಶಿಕ ಕಾರ್ಯಾಗಾರದ ಅಧ್ಯಕ್ಷ ಸದಾನಂದಗೌಡರ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಚವಾಣ್, ಉಪಾಧ್ಯಕ್ಷ ದೇವರಾಜ್ ಹಿರೇಮನಿ ಹಾಗೂ ವಿರೂಪಾಕ್ಷ ನಾಯ್ಕರ್, ಶಿವಾನಂದ ಬಾಲಣ್ಣವರ್, ವಿಜಯಗೌಡ ಕೆಂಚನಗೌಡ್ರ, ಸುನಿಲ್ ದಿವಟೆ ಹಾಗೂ ಹೊಸವಾಡ, ಚಂದ್ರಪ್ಪ ಹರಿಂದ್ರಾಲ್, ಹನಮಪ್ಪ ನಾಗೇಂದ್ರಗಡ್, ಸುರೇಶ್ ಚಂದಾಪುರ, ಜಾವೇದ್ ಖೋಜೆ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದರು.
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...