NEWSನಮ್ಮಜಿಲ್ಲೆಸಂಸ್ಕೃತಿ

ಹುಂಡಿ ಹಣ ಎಣಿಕೆ: ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಹುಂಡಿಯಲ್ಲಿ ₹59.28 ಲಕ್ಷ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ದೇವಾಲಯದ ಹುಂಡಿಯಲ್ಲಿ ಕಾಣಿಕೆರೂಪದಲ್ಲಿ ಬಂದಿರುವ ಹಣ ಹಣ ಎಣಿಕೆ ಮಾಡಿದ್ದು, 59,28,876 ರೂ. ಸಂಗ್ರಹವಾಗಿದೆ ಎಂದು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಕಾಣಿಕೆ ಹಣದ ಜತೆಗೆ 1.57 ಲಕ್ಷ ರೂ. ಮೌಲ್ಯದ 19.5 ಗ್ರಾಂ ಚಿನ್ನ, 63000 ರೂ. ಮೌಲ್ಯದ 1 ಕೆಜಿ 400 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಇಂದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಸಹ ಭಾಗವಹಿಸಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಣ ನಾಯಕ್, ಆರ್.ವಿ .ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಐಒಬಿ ಬ್ಯಾಂಕ್ ಸಿಬ್ಬಂದಿ ಇದ್ದರು.

Megha
the authorMegha

Leave a Reply

error: Content is protected !!