Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ನ್ಯೂಡೆಲ್ಲಿ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರ ಪರದಾಟ: ಸ್ಪೈಸ್ ಜೆಟ್ ಚೆಲ್ಲಾಟ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿಯ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬೆಂಗಳೂರಿಗೆ ಹೋಗಲು ಜ.21ರ ರಾತ್ರಿ 9ಗಂಟೆಗೆ ಹೊರಡಬೇಕಾಗಿದ್ದ ಸ್ಪೈಸ್ ಜಟ್ ವಿಮಾನ ವಿರಡದೆ ರಾತ್ರಿಯಿಡಿ ಪರದಾಡಿದನಡೆದಿದೆ.

ರಾತ್ರಿ 9ಕ್ಕೆ ಹೊರಡಬೇಕಿದ್ದ ವಿಮಾನದ ಸಮಯ ಬದಲಾಗಿದೆ 10 ಗಂಟೆಗೆ ಹೊರಡುತ್ತದೆ ಎಂದು ಮಾಹಿತಿ ನೀಡಿದರು, ಆ ಬಳಿಕ ಮತ್ತೆ 11 ಗಂಟೆಗೆ ಎಂದು ಎರಡು ಬಾರಿ ಸಮಯವನ್ನು ಮುಂದೂಡಿದರು. ಆಗಲು ವಿಮಾನ ಹೊರಡದೇ ಮಾರನೇ ದಿನ ಅಂದರೆ ಇಂದು ಜ.22ರ ಬೆಳಗ್ಗೆ ಆರು ಗಂಟೆಗೆ ಹೊರಡುತ್ತದೆ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ಇದರಿಂದ ಆಕ್ರೋಶಗೊಂಡ ನೂರಕ್ಕೂ ಹೆಚ್ಚು ಪ್ರಯಾಣಿಕರು ಸ್ಪೈಸ್ ಜೆಟ್ ವ್ಯವಸ್ಥಾಪಕರ ಜತೆ ವಾಗ್ವಾದ ನಡೆಸಿದರು, ವಿಳಂಬಕ್ಕೆ ಕಾರಣ ಏನು ಎಂದು ಕೇಳಿದರು ಸರಿಯಾಗಿ ಉತ್ತರ ನೀಡಲಿಲ್ಲ.

ಪ್ರಯಾಣಿಕರು ರಾತ್ರಿಯಲ್ಲ ವಿಮಾನ ನಿಲ್ದಾಣದ ಕುರ್ಚಿಗಳಲ್ಲಿ ಕುಳಿತು ಸಮಯ ಕಳೆಯಬೇಕಾಯಿತು. ರಾತ್ರಿ ಎಲ್ಲ ಕಾದು ವ್ಯವಸ್ಥಾಪಕರ ಜತೆ ವಾಗ್ವಾದ ಮಾಡಿದರು ಪ್ರಯೋಜನಕ್ಕೆ ಬರಲಿಲ್ಲ.

ನಾನು ಕೂಡ ಈ ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದ ಕಾರಣ ಈ ಪರಿಸ್ಥಿತಿಯನ್ನು ಅನುಭವಿಸಬೇಕಾಯಿತು ಎಂದು ರೈತ ಮುಖಂಡ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಸ್ಪೈಸ್ ಜೆಟ್ ಸಂಸ್ಥೆಯ ಮುಖ್ಯಸ್ಥರ ದೂರವಾಣಿ ಸಂಖ್ಯೆಯನ್ನು ಸಹ ನೀಡಲಿಲ್ಲ, ವಿಮಾನ ನಿಲ್ದಾಣ ಭದ್ರತಾಧಿಕಾರಿಗಳು ಈ ಬಗ್ಗೆ ಯಾವುದೇ ಗಂಭೀರ ಕ್ರಮ ಕೈಗೊಳ್ಳಲಿಲ್ಲ ಅವರ ಬೇಜವಾಬ್ದಾರಿತನ ಎದ್ದು ಕಾಣುತ್ತಿತ್ತು.

ಕೇಂದ್ರ ಸರ್ಕಾರದ ವಿಮಾನಯಾನ ಸಚಿವರು ಇಂತಹ ಸಂಸ್ಥೆಗಳ ರಹದಾರಿ ರದ್ದು ಮಾಡಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನೊಂದ ಪ್ರಯಾಣಿಕರು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದರು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ