NEWSದೇಶ-ವಿದೇಶನಮ್ಮರಾಜ್ಯ

ನ್ಯೂಡೆಲ್ಲಿ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರ ಪರದಾಟ: ಸ್ಪೈಸ್ ಜೆಟ್ ಚೆಲ್ಲಾಟ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿಯ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬೆಂಗಳೂರಿಗೆ ಹೋಗಲು ಜ.21ರ ರಾತ್ರಿ 9ಗಂಟೆಗೆ ಹೊರಡಬೇಕಾಗಿದ್ದ ಸ್ಪೈಸ್ ಜಟ್ ವಿಮಾನ ವಿರಡದೆ ರಾತ್ರಿಯಿಡಿ ಪರದಾಡಿದನಡೆದಿದೆ.

ರಾತ್ರಿ 9ಕ್ಕೆ ಹೊರಡಬೇಕಿದ್ದ ವಿಮಾನದ ಸಮಯ ಬದಲಾಗಿದೆ 10 ಗಂಟೆಗೆ ಹೊರಡುತ್ತದೆ ಎಂದು ಮಾಹಿತಿ ನೀಡಿದರು, ಆ ಬಳಿಕ ಮತ್ತೆ 11 ಗಂಟೆಗೆ ಎಂದು ಎರಡು ಬಾರಿ ಸಮಯವನ್ನು ಮುಂದೂಡಿದರು. ಆಗಲು ವಿಮಾನ ಹೊರಡದೇ ಮಾರನೇ ದಿನ ಅಂದರೆ ಇಂದು ಜ.22ರ ಬೆಳಗ್ಗೆ ಆರು ಗಂಟೆಗೆ ಹೊರಡುತ್ತದೆ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ಇದರಿಂದ ಆಕ್ರೋಶಗೊಂಡ ನೂರಕ್ಕೂ ಹೆಚ್ಚು ಪ್ರಯಾಣಿಕರು ಸ್ಪೈಸ್ ಜೆಟ್ ವ್ಯವಸ್ಥಾಪಕರ ಜತೆ ವಾಗ್ವಾದ ನಡೆಸಿದರು, ವಿಳಂಬಕ್ಕೆ ಕಾರಣ ಏನು ಎಂದು ಕೇಳಿದರು ಸರಿಯಾಗಿ ಉತ್ತರ ನೀಡಲಿಲ್ಲ.

ಪ್ರಯಾಣಿಕರು ರಾತ್ರಿಯಲ್ಲ ವಿಮಾನ ನಿಲ್ದಾಣದ ಕುರ್ಚಿಗಳಲ್ಲಿ ಕುಳಿತು ಸಮಯ ಕಳೆಯಬೇಕಾಯಿತು. ರಾತ್ರಿ ಎಲ್ಲ ಕಾದು ವ್ಯವಸ್ಥಾಪಕರ ಜತೆ ವಾಗ್ವಾದ ಮಾಡಿದರು ಪ್ರಯೋಜನಕ್ಕೆ ಬರಲಿಲ್ಲ.

ನಾನು ಕೂಡ ಈ ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದ ಕಾರಣ ಈ ಪರಿಸ್ಥಿತಿಯನ್ನು ಅನುಭವಿಸಬೇಕಾಯಿತು ಎಂದು ರೈತ ಮುಖಂಡ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಸ್ಪೈಸ್ ಜೆಟ್ ಸಂಸ್ಥೆಯ ಮುಖ್ಯಸ್ಥರ ದೂರವಾಣಿ ಸಂಖ್ಯೆಯನ್ನು ಸಹ ನೀಡಲಿಲ್ಲ, ವಿಮಾನ ನಿಲ್ದಾಣ ಭದ್ರತಾಧಿಕಾರಿಗಳು ಈ ಬಗ್ಗೆ ಯಾವುದೇ ಗಂಭೀರ ಕ್ರಮ ಕೈಗೊಳ್ಳಲಿಲ್ಲ ಅವರ ಬೇಜವಾಬ್ದಾರಿತನ ಎದ್ದು ಕಾಣುತ್ತಿತ್ತು.

ಕೇಂದ್ರ ಸರ್ಕಾರದ ವಿಮಾನಯಾನ ಸಚಿವರು ಇಂತಹ ಸಂಸ್ಥೆಗಳ ರಹದಾರಿ ರದ್ದು ಮಾಡಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನೊಂದ ಪ್ರಯಾಣಿಕರು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದರು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ