CRIMENEWSಕ್ರೀಡೆಸಿನಿಪಥ

ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು: ರ‍್ಯಾಪರ್ ಚಂದನ್ ಶೆಟ್ಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದ್ದು, ಅಲ್ಲದೆ ನನಗೂ ಕೂಡ ಜನಗಳ ಮಧ್ಯೆ ಉರಿರುಗಟ್ಟಿತು ಎಂದು ರ‍್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಯುವಕ ಯುವತಿಯರು ಮೃತಪಟ್ಟಿರುವುದ ಕುರಿತು ಮಾತನಾಡಿದರು.

ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದು ನಿನ್ನೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ.

ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ನೋಡಲು ಆಗುತ್ತಿಲ್ಲ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ