NEWSನಮ್ಮರಾಜ್ಯಶಿಕ್ಷಣ-

ನಾನು ಲಾಸ್ಟ್ ಬೆಂಚ್ ವಿದ್ಯಾರ್ಥಿ ಕಾಪಿ ಹೊಡೆದು ಪಾಸಾಗಿದ್ದೇನೆ : ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ. ಲಾಸ್ಟ್ ಬೆಂಚ್ ವಿದ್ಯಾರ್ಥಿ. ಕಾಪಿ ಹೊಡೆದು ಪಾಸಾಗಿದ್ದೇನೆ. ಕಾಪಿ ಹೊಡೆಯುವುದರಲ್ಲಿ ನಾನು ಪಿಎಚ್ ಡಿ ಮಾಡಿದ್ದೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಕಾಲೇಜ್ ದಿನಗಳನ್ನು ಶನಿವಾರ ಮೆಲುಕು ಹಾಕಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ವೀರಶೈವ ವಿದ್ಯಾವರ್ಧಕ ಸಂಘದ ಎಸ್‌ಜಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೊದಲು ನಾನೂ ಗೂಂಡಾಗಿರಿ ಮಾಡುತ್ತಿದ್ದೆ. ತುಂಬಾ ಜಗಳ ಮಾಡುತ್ತಿದ್ದೆ. ಬಡವರಿಗೆ ಯಾರಾದ್ರೂ ತೊಂದರೆ ಕೊಟ್ಟಾಗ ಮಾತ್ರ ಗೂಂಡಾಗಿರಿ ಮಾಡುತ್ತಾ, ಅವರ ಪರವಾಗಿ ನಿಲ್ಲುತ್ತಿದೆ. ಬಡವರ ಪರವಾಗಿ ನಿಂತು ಜಗಳವಾಡಿ 14-15 ಬಾರಿ ಜೈಲಿಗೂ ಹೋಗಿದ್ದೆ ಎಂದು ಹೇಳಿದರು.

ಇನ್ನು ವಕೀಲರ ಬಳಿ ನಮ್ಮಪ್ಪ ಹೋಗಿ ನನಗೆ ಬೇಲ್‌ ಮಾಡಿಸಿಕೊಡಿ ಎಂದು ಕೇಳುತ್ತಿದ್ದರು. ಆಗ ನಿಮ್ಮ ಮಗನಿಗೆ ಎಷ್ಟು ಬಾರಿ ಬೇಲ್‌ ಮಾಡಿಸಬೇಕು ಎಂದು ವಕೀಲರು ಹೇಳುತ್ತಿದ್ದರು. ಅಲ್ಲದೆ ಇವನಿಂದ ನನಗೆ ಕೆಲಸ ಸಿಕ್ಕಂತಾಗಿದೆ ಎಂದು ಹೇಳುತ್ತಿದ್ದರು ಎಂದು ನೆನಪಿಸಿಕೊಂಡರು.

ಕಾಲೇಜಿಗೆ ನಾನು ಜೀನ್ಸ್‌ಪ್ಯಾಂಟ್‌ ಹಾಕಿಕೊಂಡು ಹೋದ್ರೆ ಹುಡುಗೀರೆಲ್ಲಾ ನನ್ನನ್ನೇ ನೋಡುತ್ತಿದ್ದರು. ನನಗೆ ಓದು ತಲೆಗೆ ಹತ್ತಲಿಲ್ಲ, ಆದರೆ ಸಂಸ್ಕಾರ ಮಾತ್ರ ಬಿಡಲಿಲ್ಲ. ನಾನು ಬಾರಿ ಬುದ್ಧಿವಂತನಲ್ಲ, ಲಾಸ್ಟ್​ ಬೆಂಚ್ ಸ್ಟೂಡೆಂಟ್​. ಶಿಕ್ಷಕರು ಪ್ರೀತಿಯಿಂದ ಬೈಯ್ತಿದ್ದರು. 5 ಬಾರಿ ಶಾಸಕ, 4 ಬಾರಿ ಸಚಿವನಾಗಿರುವುದಕ್ಕೆ ವಿವಿ ಸಂಘ ಕಾರಣ. ಸಂಸ್ಕಾರ ಗೊತ್ತಿರದ ದಿನಗಳಲ್ಲಿ ನನಗೆ ಸಂಸ್ಕಾರ ನೀಡಿದ್ದು ಈ ಸಂಘ ಎಂದರು.

ಶಿಕ್ಷಕರು ಬಂದಾಗ ಲಾಸ್ಟ್​ ಬೆಂಚ್​ನಲ್ಲಿ ಕುಳಿತು ಅಂಗಿಸುತ್ತಿದ್ದೆವು. ಕನ್ನಡ ಬರಲ್ಲ, ತೆಲುಗು ಬರಲ್ಲ, ಇಂಗ್ಲಿಷ್ ಬರಲ್ಲ ಎಂದು ಹೇಳುತ್ತಿದ್ದರು. ನೀನು ಯಾವ ಶಾಲೆಯಲ್ಲಿ ಓದಿದ್ದು ಎಂದು ಶಿಕ್ಷಕರು ಕೇಳುತ್ತಿದ್ದರು ಎಂದು ಶ್ರೀರಾಮುಲು ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ