ಬೆಂಗಳೂರು: ಕನ್ನಡದ ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ನಾಡಿನ ಜನರಿಗೆ ಪರಿಚಿನಾದ ಕಿರಿಕ್ ಕೀರ್ತಿ ನ್ಯೂಸ್ ಚಾನೆಲ್ಗಳ ಆಂಕರ್ ಆಗಿ ಕನ್ನಡ ಪರ ಹೋರಾಟಗಾರರಾಗಿ ಸಮಾಜದಲ್ಲಿ ಈಗ ಗುರುತಿಸಿಕೊಂಡಿರುವ ವ್ಯಕ್ತಿ.
ಬಹುತೇಕ ಕ್ಷೇತ್ರದಲ್ಲಿ ಹೆಚ್ಚೆಚ್ಚು ಆಕ್ಟಿವ್ ಆಗಿ ಇದ್ದಂತಹ ಕೀರ್ತಿಯವರು ಕೆಲವು ವರ್ಷಗಳ ಹಿಂದಷ್ಟೇ ಅರ್ಪಿತಾ ಎಂಬುವರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಆವಿಷ್ಕಾರ್ ಎಂಬ ಮುದ್ದು ಮಗನಿದ್ದಾನೆ.
ಇದರ ಜತೆಗೆ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದ ಈ ಜೋಡಿಗಳ ಮೇಲೆ ಅದ್ಯಾರ ಕೆಟ್ಟ ಕಣ್ಣು ಬಿತ್ತು ಗೊತ್ತಿಲ್ಲ ಕಿರಿಕ್ ಕೀರ್ತಿ ಹಾಗೂ ಅರ್ಪಿತಾ ಕೆಲ ತಿಂಗಳುಗಳಿಂದ ಜಗಳ ಮಾಡಿಕೊಂಡು ದೂರಾಗಿದ್ದರು. ಅರ್ಪಿತಾ ತಮ್ಮ ಮಗನೊಂದಿಗೆ ಕಿರಿಕ್ ಕೀರ್ತಿ ಅವರ ಮನೆ ಬಿಟ್ಟು ತವರು ಮನೆ ಸೇರಿದ್ದರು.
ಹೀಗೆ ದಂಪತಿ ಮಧ್ಯೆ ಏನೋ ಬಿರುಕು ಮೂಡಿರಬಹುದು ಕೆಲವು ದಿನಗಳಲ್ಲಿ ಮತ್ತೆ ಒಂದಾಗುತ್ತಾರೆ ಎಂದು ಕುಟುಂಬಸ್ಥರು ಸ್ನೇಹಿತರು ಹಾಗೂ ಅಭಿಮಾನಿಗಳೂ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಹುಸಿಯಾಗಿದ್ದು ಆಘಾತಕಾರಿ ಸುದ್ದಿ ಒಂದನ್ನು ಕೀರ್ತಿಯೇ ಹೇಳಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ ಹಾಗೂ ಫೇಸ್ಟುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಕಿರಿಕ್ ಕೀರ್ತಿಯವರು ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ ಎಂಬ ಬರಹದ ಮೂಲಕ ತಮ್ಮ ಪತ್ನಿಯಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿರುವ ಮಾಹಿತಿಯನ್ನು ಹೊರಹಾಕಿದ್ದಾರೆ.
ಜೋಡಿ ನಂಬರ್ ಒನ್ ಕಾರ್ಯಕ್ರಮದಲ್ಲಿ ಬಹಳನೇ ಲವಲವಿಕೆಯಿಂದ ಕಾಣಿಸಿಕೊಂಡಿದಂತಹ ಈ ಜೋಡಿಗಳು ಸದಾ ಕಾಲ ಹೀಗೆ ಇರಲಿ ಎಂದು ಅದೆಷ್ಟೋ ಕನ್ನಡ ಅಭಿಮಾನಿಗಳು ಹಾರೈಸುತ್ತಿದ್ದರು. ಆದರೆ ವೈಯಕ್ತಿಕ ಬದುಕಿನಲ್ಲಿ ಮೂಡಿದಂತಹ ಕೆಲ ಮನಸ್ತಾಪ ಹಾಗೂ ಅಪನಂಬಿಕೆಯಿಂದ ಕೀರ್ತಿ ಮತ್ತು ಅರ್ಪಿತಾ ಜಗಳವಾಡಿಕೊಂಡು ಅಂತರ ಕಾಯ್ದುಕೊಂಡಿದ್ದರು. ಪ್ರತಿಯೊಬ್ಬರಿಗೂ ಮತ್ತೆ ಈ ಜೋಡಿಗಳು ಮಗನಿಗೋಸ್ಕರವಾದರೂ ಒಂದಾಗುತ್ತಾರೆ, ಎಂಬ ನಂಬಿಕೆ ಇತ್ತು.

ಆದರೆ ಕಿರಿಕ್ ಕೀರ್ತಿ ಅವರು ಕಾನೂನು ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ ಪತ್ನಿ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ ಹಾಗೂ ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.
ಒಂದೊಳ್ಳೆ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಇಂತಿ ನಿಮ್ಮ ಕಿರಿಕ್ ಕೀರ್ತಿ ಎಂಬ ಪತ್ರವನ್ನು ಹಂಚಿಕೊಂಡಿದ್ದಾರೆ.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...