ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.
ಈ ವಿಚಾರಣೆ ವೇಳೆ ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನಗಳೆ ಕಳೆದುಹೋಗಿವೆ. ಇನ್ನು ಬಟ್ಟೆಗಳು ವಾಸನೆ ಬರುತ್ತಿವೆ. ಬಿಸಿಲು ಬೀಳದೆ ಫಂಗಸ್ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು.
ದರ್ಶನ್ ಅವರ ಮನವಿಗೆ ಜಡ್ಜ್ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಆದರೂ ವಿಷ ಕೊಡಿ ಎಂದು ದರ್ಶನ್ ಮೂರು ಬಾರಿ ಬೇಡಿಕೊಂಡಿದ್ದು, ಅಲ್ಲದೆ ಫಂಗಸ್ ಆಗಿದೆ ಎಂದು ಹಲವು ಬಾರಿ ಅಳಲು ತೋಡಿಕೊಂಡರು.
ಇನ್ನು ದೈವ ಭಕ್ತರಾಗಿರುವ ದರ್ಶನ್ ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ವಿಚಾರಣೆಗೆ ಹಾಜರಾಗಿದ್ದು ವಿಶೇಷವಾಗಿತ್ತು.
ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು (ಸೆ.9) ಮಧ್ಯಾಹ್ನ 3 ಗಂಟೆಗೆ ಆದೇಶ ನೀಡುವುದಾಗಿದೆ ಹೇಳಿದೆ.

Related


You Might Also Like
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...