ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ವೇತನ ಹೆಚ್ಚಳವಾಗಿದೆ. ಹೀಗಾಗಿ 38 ತಿಂಗಳ ಈ ಹೆಚ್ಚಳದ ಬಾಕಿ ಕೊಡುಬೇಕು ಎಂಬುವುದು ಯಾವಾಗಲು ನನ್ನ ತಲೆಯಲ್ಲಿ ಕೊರೆಯುತ್ತಲೇ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
38 ತಿಂಗಳ ವೆತನ ಹೆಚ್ಚಳದ ಹಿಂಬಾಕಿ ಕೊಡುವ ಸಂಬಂಧ ಅನೇಕ ಬಾರಿ ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೇನೆ. ಪದೇಪದೇ ಅವರ ಗಮನಕ್ಕೆ ತಂದಿದ್ದೇನೆ ಇದೊಂದು ಸೆಟಲ್ಮೆಂಟ್ ಆಗಿಬಿಟ್ಟರೆ ನನಗೂ ಸಮಾಧಾನ. ಏಕೆಂದರೆ ಬಹಳ ಮುಖ್ಯವಾಗಿ ನನ್ನ ತಲೆಯಲ್ಲಿ ಯಾವಾಗಲು ಕೊರೆಯುತ್ತಿರುತ್ತೆ. ಅದೊಂದು ಸೆಟಲ್ಮೆಂಟ್ ಬೇಗ ಆಗಬೇಕು ಎಂದು ಹೇಳಿದರು.
ಇನ್ನು ಉಳಿದಂತೆ 4 ವರ್ಷಕ್ಕೊಮ್ಮೆ ಆಗುತ್ತಿರುವ ಅಗ್ರಿಮೆಂಟ್ ಬೇಡ ಸರ್ಕಾರದಲ್ಲಿ ಏನು ಸರ್ಕಾರಿ ನೌಕರರಿಗೆ ಕೊಡುತ್ತಿದ್ದೀರೋ ಅದೇ ರೀತಿ ಸರಿ ಸಮಾನ ವೇತನ, ಸವಲತ್ತುಗಳು ಸಿಗಬೇಕು ಎಂದು ಏನು ಹೇಳಿದ್ದಾರಲ್ಲ ಅದರ ಬಗ್ಗೆ ನಾನು ಮುಖ್ಯಮಂತ್ರಿಗಳ ಜತೆ ಚರ್ಚಿಸಿಸುತ್ತೇನೆ. ನಾನೆ ಮಾಡುತ್ತೇನೆ ಎಂದು ಹೇಳಿದರೆ ತಪ್ಪಾಗುತ್ತೆ. ಹೀಗಾಗಿ ಸಿಎಂ ಜತೆ ಚರ್ಚಿಸಿ ನಿಮ್ಮ ಬೇಡಿಕೆ ಈಡೇರಿಕೆಗೆ ಹೆಚ್ಚು ಗಮನ ಕೊಡಲಾಗುವುದು ಎಂದು ಭರವಸೆ ನೀಡಿದರು.
ಇನ್ನು ನೌಕರರ ಸಂಘಟನೆಗಳ ಚುನಾವಣೆ ಆಗಲೇಬೇಕು ಎಂದು ನೌಕರರು ಹಠ ಹಿಡಿದರು. ಅದಕ್ಕೆ ನಾನು 2013-17ರವೆಗೂ ಸಾರಿಗೆ ಸಚಿವರಾಗಿದ್ದಾಗಲೂ ಈ ಬೇಡಿಕೆ ಇದೆ. ಎಲ್ಲದಕ್ಕೂ ಸಮಯ ಬರುತ್ತದೆ ಸಮಯ ಬಂದಾಗ ಎಲ್ಲ ತನಗೆತಾನೇ ಆಗುತ್ತೆ ಎಂದು ಹೇಳಿದರು.
ಇನ್ನು ಬಹಳ ಮುಖ್ಯವಾಗಿ ರಾಜ್ಯದ 4 ಸಾರಿಗೆ ನಿಗಮಗಳ ಸಿಬಂದಿಗೆ ಸರ್ಕಾರಿ ನೌಕರರಂತೆಯೇ ಸಲವತ್ತು ಪರಿಷ್ಕೃತ ಸಮಾನ ವೇತನ ನೀಡಲು ಆಯೋಗ ರಚನೆ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ. ಈ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ‘ಶಕ್ತಿ’ಯೋಜನೆ ಜಾರಿ ಬಳಿಕ ನಿಗಮಗಳ ಬಸ್ಗಳಲ್ಲಿ ಒಂದು ಕೋಟಿಗೂ ಅಧಿಕ ಮಂದಿ ಮಹಿಳೆಯರು ಪ್ರಯಾಣಿಸಿದ್ದು ಸಶಕ್ತಿಕರಣಕ್ಕೆ ನಾಂದಿಯಾಗಿದೆ. 2020ರ ಬಿಜೆಪಿ ಆಡಳಿತದಲ್ಲಿ 3,800 ಬಸ್ಗಳು ಸ್ಥಗಿತಗೊಂಡಿದ್ದವು. ಬಿಎಂಟಿಸಿ ಹೊರತುಪಡಿಸಿ ನಾಲ್ಕು ವರ್ಷ ಯಾವುದೇ ಹೊಸ ಬಸ್ ಖರೀದಿಸಿರಲಿಲ್ಲ. 14 ಸಾವಿರ ಮಂದಿ ನಿವೃತ್ತಿ ಯಾದರೂ ನೇಮಕಾತಿ ಪ್ರಕ್ರಿಯೆಯಾಗಿರಲಿಲ್ಲ.
ಆದರೆ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ 6,200 ಬಸ್ಗಳ ಪೈಕಿ 3 ಸಾವಿರ ಹೊಸ ಬಸ್ ಖರೀದಿಸಿ ಸಂಚಾರ ಆರಂಭಿಸಿವೆ. ವಾಯವ್ಯ, ಕಲ್ಯಾಣ, ಬಿಎಂಟಿಸಿ ಒಳಗೊಂಡಂತೆ ನಿಗಮಗಳಲ್ಲಿ 7,500 ಮಂದಿ ಚಾಲಕ ಕಂ ನಿರ್ವಾಹಕ ಹುದ್ದೆ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಉದ್ಯೋಗ ಸೃಷ್ಟಿ, ನೇಮಕಾತಿ ಹೊಸ ಉದ್ದಿಮೆ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಸಿಗಬೇಕು. ವೇತನ ಪರಿಷ್ಕರಣೆಗೆ ಆಯೋಗ ರಚಿಸಬೇಕು. ಸಿಬಂದಿಗಳ ಒಪ್ಪಂದ ಆಧಾರಿತ ನೇಮಕಾತಿ ಪದ್ಧತಿ ರದ್ದುಪಡಿಸುವುದು. ಉಚಿತ ಆರೋಗ್ಯ ಸೇವೆ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಇನ್ನು ಎಲೆಕ್ಟ್ರಿಕ್ ಬಸ್ಗಳ ಖರೀದಿ ಕೇಂದ್ರ ಸರ್ಕಾರದ ಒಂದು ಪಾಲಿಸಿಯಾಗಿದ್ದು ಸಾರಿಗೆ ನಿಗಮಗಳನ್ನು ಖಾಸಗೀಕರಣಗೊಳಿಸುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...