NEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯ ವಿದ್ಯಮಾನ ಕುರಿತು ನಾಳೆ ಮಾತನಾಡುತ್ತೇನೆ: ಸಿಎಂ ಒಂದ್ಸಾಲ್‌ ಹೇಳಿಕೆ

ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು, ಶಾಸಕರ ಜತೆ ಬೆಳಗಿನ ಉಪಾಹಾರ ಸಭೆ ನಡೆಸಲಿದ್ದಾರೆ. ಆ ಸಭೆಯ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್‌ನಾಟಕ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳು ಏನೆ ಇದ್ದರೂ ಅವುಗಳಿಗೆ ನಾಳೆ ಉತ್ತರ ಕೊಡುತ್ತೇನೆ ಎಂದು ಒಂದು ಸಾಲಿನ ಹೇಳಿಕೆ ಕೊಟ್ಟಿದ್ದಾರೆ.

ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಸ್ಮರಣಾರ್ಥ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ಮಾತನಾಡಿದರು.

ಈ ವೇಳೆ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅವರ ಸಾಧನೆಗಳನ್ನು ಶ್ಲಾಘಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳು ರಾಜ್ಯ ರಾಜಕೀಯದ ಪ್ರಸ್ತುತ ಬೆಳವಣಿಗೆಗಳು, ತಾವು ದೆಹಲಿ ಪ್ರವಾಸ ಮುಗಿಸಿ ಬಂದ ಬಗ್ಗೆ ಪ್ರಶ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬದಲಿಗೆ ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಹೊರಟು ಹೋದರು.

ಸಾಮಾನ್ಯವಾಗಿ ಸಿದ್ದರಾಮಯ್ಯ ಎಂದರೆ ಬಹಳ ಗಟ್ಟಿಯಾಗಿ ಹೇಳಿಕೆ ನೀಡುವ, ಮಾಧ್ಯಮಗಳು ಅಡ್ಡ ಪ್ರಶ್ನೆ ಹಾಕಿದರೆ ಏನಯ್ಯ ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕುವ ವ್ಯಕ್ತಿ. ಆದರೆ ಇಂದು ಅವರಲ್ಲಿ ಆ ಗಡಸುತನ ಕಾಣಲಿಲ್ಲ ಬದಲಿಗೆ ಬೇಸರದಲ್ಲಿ ಇರುವುದು ಎದ್ದು ಕಾಣಿಸುತ್ತಿತ್ತು.

ಇನ್ನು ಇಂದಿನ ಕಾರ್ಯಕ್ರಮದ ಬಳಿಕ ಇಂದು ಸಿಎಂ ಅವರಿಗೆ ಯಾವುದೇ ಸರ್ಕಾರಿ ಕಾರ್ಯಕ್ರಮ ನಿಗದಿಯಾಗಿಲ್ಲ. ಹೀಗಾಗಿ ಇಂದಿನ ಸರ್ಕಾರಿ ಕಾರ್ಯಕ್ರಮವನ್ನು ಮುಗಿಸಿದ ಮುಖ್ಯಮಂತ್ರಿಗಳು ವಿಧಾನಸೌಧದಿಂದ ನೇರವಾಗಿ ತಮ್ಮ ಅಧಿಕೃತ ಸರ್ಕಾರಿ ನಿವಾಸ ಕಾವೇರಿಗೆ ವಾಪಸ್ಸಾದರು.

ಸಿದ್ದರಾಮಯ್ಯನವರು ನಾಳೆ ಮೇ 28ರ ಬೆಳಗ್ಗೆ ತಮ್ಮ ಆಪ್ತ ಸಚಿವರು, ಶಾಸಕರ ಜತೆ ಬೆಳಗಿನ ಉಪಾಹಾರ ಸಭೆ ನಡೆಸಲಿದ್ದಾರೆ. ಆ ಸಭೆಯ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

Deva
the authorDeva

Leave a Reply

error: Content is protected !!
Latest news
ಕಿರುಗಾವಲು: ಪತ್ನಿ ಮುಂದೆ ಶ್ರೀಮಂತ ಎಂದು ತೋರಿಸಿಕೊಳ್ಳಲು ಸರಗಳ್ಳತನ- ಈತ ಸೇರಿ ನಾಲ್ವರ ಬಂಧನ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 36 ಸಾವಿರ ರೂ. ಹೆಚ್ಚಿಸಲು ಆಗ್ರಹಿಸಿ ಮೇ 30ರಂದು ಸಿಐಟಿಯು ಪ್ರತಿಭಟನೆ ಶಂಕಿತ ಎಬೋಲಾ ನೆಗಿಟಿವ್ ಆತಂಕಪಡುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್ ರಾಜ್ಯ ರಾಜಕೀಯ ವಿದ್ಯಮಾನ ಕುರಿತು ನಾಳೆ ಮಾತನಾಡುತ್ತೇನೆ: ಸಿಎಂ ಒಂದ್ಸಾಲ್‌ ಹೇಳಿಕೆ ಸಿದ್ದೂಜಿ ನೀವು ಇಲ್ಲಿಗೆ ಬಂದುಬಿಡಿ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರೋಚಕ ತಿರುವು! ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ನಮ್ಮ ಮೆಟ್ರೋ ಹಳಿ ಮೇಲೆ ಬಿದ್ದ ಮರದ ಕೊಂಬೆ, ಪ್ರಯಾಣಿಕರ ಪರದಾಟ KSRTC ನೌಕರ ಕೇಶವಮೂರ್ತಿ ಹೃದಯಾಘಾತದಿಂದ ನಿಧನ ರೈತರ ನಿರ್ಲಕ್ಷ್ಯ ಮಾಡಿದರೆ ಬೀದಿಗಿಳಿದು ಹೋರಾಟ: ಕೇಂದ್ರ-ರಾಜ್ಯ. ಸರ್ಕಾರಗಳಿಗೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ BMTC "ವಜ್ರ ವಿಸ್ತಾರ" ಬಸ್‌ಗಳಲ್ಲಿ ಮಕ್ಕಳಿಗೆ ಶೇ.25ರಷ್ಟು ರಿಯಾಯಿತಿ, ಹಿರಿಯ ನಾಗರಿಕರಿಗೆ ರಿಯಾಯಿತಿ ಇಲ್ಲ- ಸಿಟಿಎಂ ... ನಾಳೆ ಕನಿಷ್ಠ ಪಿಂಚಣಿ 7,500 ರೂ. ಮಾಡಲು ಆಗ್ರಹಿಸಿ ಪಿಎಫ್ ಕಚೇರಿ ಮುಂದೆ EPS-95, BMTC-KSRTC ನಿವೃತ್ತ ನೌಕರರ ಪ್ರತ...