7ನೇ ವೇತನ ಆಯೋಗದಂತೆ ಸಂಬಳ ಕೊಟ್ಟರೆ ಅದು KSRTC ಅಧಿಕಾರಿಗಳಿಗಷ್ಟೇ ಸೀಮಿತವಾಗಲ್ಲ ನೌಕರರಿಗೂ ಸಿಗುತ್ತದೆ!

ಬೆಂಗಳೂರು: ಸಾರಿಗೆ ಅಧಿಕಾರಿಗಳಿಗಷ್ಟೇ 7ನೇ ವೇತನ ಆಯೋಗದ ಮಾದರಿಯಲ್ಲಿ ಸಂಬಳ ಕೊಡಿ ಎಂದಷ್ಟೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕೆಎಸ್ಆರ್ಟಿಸಿ ಆಫೀಸರ್ಸ್ ವೆಲ್ಫೇರ್ ಅಸೋಶಿಯೇಶನ್ ಪದಾಧಿಕಾರಿಗಳು ಒತ್ತಾಯಿಸಿಲ್ಲ ಅಧಿಕಾರಿಗಳು/ಸಿಬ್ಬಂದಿಗಳು/ನೌಕರರಿಗೂ ಕೊಡಿ ಎಂದೇ ವಿವರಿಸಿದ್ದಾರೆ.
ಆದರೆ, ಕೆಲ ನೌಕರರು ಅದನ್ನು ಸರಿಯಾಗಿ ತಿಳಿದುಕೊಳ್ಳದೆ ಇದು ಬರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ನೋಡಿ ಇದು ಹೇಳಿ ಕೇಳಿ ಆಫೀಸರ್ಸ್ ವೆಲ್ಫೇರ್ ಅಸೋಶಿಯೇಶನ್ ಆಗಿರುವುದರಿಂದ ಈ ರೀತಿ ಮನವಿ ಸಲ್ಲಿಸುವುದು ಸಾಮಾನ್ಯ.
ಈ ಮನವಿ ಸಲ್ಲಿಸುವ ವೇಳೆ 15 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ ಅದನ್ನು ನೌಕರರು ಗಮನಿಸಬೇಕು. ಸಂಸ್ಥೆಯನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಸರಕಾರದ ಹಾಗೂ ನೌಕರರ ಪಾತ್ರ ಅಪಾರವಾಗಿದ್ದು, ತನ್ನ ಕಾಲ ಮೇಲೆ ತಾನು ನಿಲ್ಲಲು, ಇದರಲ್ಲಿ ಕೇವಲ ಒಂದು ವರ್ಗದ ಹಿತಾಸಕ್ತಿ ಇರುವುದಿಲ್ಲ, ಎಲ್ಲ ವರ್ಗದ ಅಧಿಕಾರಿ/ಸಿಬ್ಬಂದಿ/ನೌಕರರ ಹಾಗೂ ಅವರ ಕುಟುಂಬದವರ ಜೀವನದ ಪ್ರಶ್ನೆಯಾಗಿರುವುದಲ್ಲದೇ ಹಾಗೂ ನಾಡಿನ ಜನತೆಯ ಜೀವನಾಡಿಯಾದ ಸಾರಿಗೆ ಸಂಸ್ಥೆಯ ಉಳಿವಿನ ಪ್ರಶ್ನೆಯೂ ಇದಾಗಿದೆ.
ಸರಕಾರ ಈ ಇಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಲ್ಲಿ ಮಾತ್ರ. ಈ ಮುಳಗುತ್ತಿರುವ ಹಡಗು ಮತ್ತೆ ಪ್ರಯಾಣಿಸಲು ಸಾಧ್ಯ. ಕಾರಣ ಈ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಹಾಗೂ ಅಧಿಕಾರಿಗಳ ಬೇಡಿಕೆ ಈಡೇರಿಸಿ ಅವರ ಮನೋಸ್ಥೆರ್ಯ ಹೆಚ್ಚಿಸಲು ತಮ್ಮಲ್ಲಿ ಈ ಮೂಲಕ ಕೋರುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಜತೆಗೆ ಸಂಸ್ಥೆಯಲ್ಲಿ ಅಧಿಕಾರಿಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅನಿವಾರ್ಯವಿದ್ದು, ಸಹಜವಾಗಿ ಆನಾರೊಗ್ಯಕ್ಕೆ ತುತ್ತಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ವೈದ್ಯಕೀಯ ವೆಚ್ಚಗಳನ್ನು ಮುರುಪಾವತಿಸಲು ಹಾಲಿ ನಿಯಮಗಳಲ್ಲಿ ಹಲವಾರು ನಿರ್ಬಂಧಗಳಿದ್ದು, ಹಾಲಿ ನಿರ್ಬಂಧಗಳನ್ನು ಸಡಿಲಗೊಳಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಾವುದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಸಂದರ್ಭಗಳಲ್ಲಿ CGHS ದರಗಳನ್ವಯ ಅವರುಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅಂದರೆ ಇಲ್ಲಿ ಅಧಿಕಾರಿಗಳಿಗೆ ಮಾತ್ರ ವೈದ್ಯಕೀಯ ಸೌಲಭ್ಯ ಕೊಡಿ ಎಂದು ಅವರು ಹೇಳಿಲ್ಲ ಸಿಬ್ಬಂದಿಗಳಿಗೂ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಇದನ್ನು ತಪ್ಪಾಗಿ ತಿಳಿದುಕೊಂಡು ಇಲ್ಲ ಸಲ್ಲದ ರೀತಿ ಆರೋಪ ಮಾಡುವುದು ನೌಕರರಿಗೆ ಬುದ್ಧಿ ಇಲ್ಲ ಎಂಬುದನ್ನು ತೋರಿಸುತ್ತದೆ. ಹಾಗಾಗಿ ಆರೋಪ ಮಾಡುವ ಮುನ್ನ ಯೋಚಿಸಿ ತಿಳಿದುಕೊಂಡು ಬಳಿಕ ಆರೋಪ ಮಾಡಿ ಎಂದು ನೌಕರರೇ ಅಸಮಾಧಾನದಿಂದ ತಿಳಿ ಹೇಳುತ್ತಿದ್ದಾರೆ.
ಇನ್ನು ಈವರೆಗೂ ವೇತನ ಅಥವಾ ಸಂಸ್ಥೆಯಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಳೆದ 40 ವರ್ಷಗಳಿಂದಲೂ ಒಂದೇಒಂದು ಮನವಿಯನ್ನು ಕೊಡದ ಅಧಿಕಾರಿಗಳ ಸಂಘ ಈಗ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿಕೊಡಬೇಕು ಎಂದು ಮುಂದೆ ಬಂದು ಸರ್ಕಾರಕ್ಕೆ ಮತ್ತು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದೆ ಎಂದರೆ ಆ ಮನವಿಯಿಂದ ಕೇವಲ ಅಧಿಕಾರಿಗಳಿಗಷ್ಟೇ ಲಾಭವಾಗುವುದಿಲ್ಲ ಸಮಸ್ತ ನಾಲ್ಕೂ ನಿಗಮಗಳ ನೌಕರರಿಗೂ ಲಾಭವಾಗುತ್ತದೆ. ಇದನ್ನು ಮೊದಲು ತಿಳಿದುಕೊಳ್ಳಿ.
ಕಾರಣ ಈವರೆಗೂ ನೌಕರರು ವೇತನ ಹೆಚ್ಚಳದ ಸಮಯದಲ್ಲಿ ಹೋರಾಟ ಮಾಡಿ ವೇತನ ಹೆಚ್ಚಾದಾಗ ಅದು ಅಧಿಕಾರಿಗಳಿಗೂ ಅನ್ವಯವಾಗುತ್ತಿತ್ತು. ಅದರಂತೆ ಈಗ 7 ನೇ ವೇತನ ಆಯೋಗ ಜಾರಿಯಾದರೆ ಅದು ನೌಕರರಿಗೂ ಅನ್ವಯಿಸಲಿದೆ. ಆದರೆ ನೌಕರರ ಪರ ಸಂಘಟನೆಗಳು ಎಂದು ಹೇಳಿಕೊಳ್ಳುವ ಮುಖಂಡರು ಮಧ್ಯೆ ಕಡ್ಡಿಯಾಡಿಸಬಾರು ಅಷ್ಟೆ.
ಇಲ್ಲ ಅಧಿಕಾರಿಗಳನ್ನು ಒಂದು ಗುಂಪು ಮಾಡಿ ನೌಕರರನ್ನು ಮತ್ತೊಂದು ಗುಂಪು ಮಾಡಿ ನೌಕರರಿಗೆ ಅಗ್ರಿಮೆಂಟ್ ಮೂಲಕವೇ ವೇತನಕೊಡಿ ಎಂದು ಕೇಳಬಾರದು. ಅಧಿಕಾರಿಗಳಿಗೆ ಏನು ಕೊಡುತ್ತೀರೋ ಅದೇ ರೀತಿ ನೌಕರರಿಗೂ ಕೊಡಬೇಕು ಎಂದು ಒತ್ತಾಯಿಸಬೇಕು. ಈ ಒತ್ತಾಯ ಮಾಡದಿದ್ದರೂ ಅಧಿಕಾರಿಗಳಿಗೆ ಸಿಗುವ ಸೌಲಭ್ಯಗಳು ತನ್ತಾನೆ ನೌಕರರಿಗೂ ಜಾರುಯಾಗುತ್ತವೆ.
ಇನ್ನು ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಂಸ್ಥೆಯ ಮಂಡಳಿಗಳಿದ್ದು, ಈ ಮಂಡಳಿಗಳಿಗೆ ಸರ್ಕಾರದಿಂದ ನೇಮಿಸಲ್ಪಟ್ಟ ಅಧಿಕಾರಿ/ಅಧಿಕಾರೇತರ ನಿರ್ದೇಶಕರು ಇದ್ದು, ಸಂಸ್ಥೆಯ ನಿಲುವುಗಳ ಬಗ್ಗೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ, ಸಂಸ್ಥೆಯ ನಿಲುವುಗಳನ್ನು ಪರಿಣಾಮಕಾರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗುವಂತೆ, ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಾಮನಿರ್ದೇಶನಗೊಂಡ ಒಬ್ಬ ಅಧಿಕಾರಿಯನ್ನು ಹಾಗೂ ನೌಕರರ ವರ್ಗದವರಿಂದ ನಾಮನಿರ್ದೇಶನಗೊಂಡ ಒಬ್ಬ ನೌಕರನನ್ನು ಸಂಸ್ಥೆಯ ನಿರ್ದೇಶಕ ಮಂಡಳಿಗೆ ನಾಮನಿರ್ದೇಶನ ಮಾಡಬೇಕು ಇದರಿಂದ ಅಧಿಕಾರಿಗಳ ಹಾಗೂ ನೌಕರರ ಹಿತ ಕಾಪಾಡಲು ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅಂದರೆ ಇದೆಲ್ಲ ಬರಿ ಅಧಿಕಾರಿಗಳಿಗಾಗಿ ಸಲ್ಲಿಸಿರುವ ಮನವಿ ಪತ್ರವೇ? ಅಲ್ಲತಾನೆ. ಇದು ನೌಕರರಿಗೂ ಅನುಕೂಲವಾಗಲಿದೆ ಎಂದು ಇಲ್ಲಿ ಅಧಿಕಾರಿಗಳು ನೌಕರರು ಎಂಬ ಬೇಭಾವವಿಲ್ಲದೆ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಮನವಿ ಸಲ್ಲಿಸಿದೆ. ಈ ಮೂಲಕ ಕಳೆದ 40 ವರ್ಷಗಳಿಂದ ಹೋರಾಟವೇ ಬೇಡ ಎನ್ನುತ್ತಿದ್ದ ಅಧಿಕಾರಿಗಳು ನ್ಯಾಯಕ್ಕಾಗಿ ಬೀದಿಗಿಳಿಯುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ನೌಕರರಿಗೂ ಲಾಭವಾಗುತ್ತದೆ. ಹೀಗಾಗಿ ಇಲ್ಲ ಸಲ್ಲದನ್ನು ಊಹಿಸಿಕೊಂಡು ನಿಮ್ಮ ಕಾಲ ಮೇಲೆ ನೀವೆ ಕಲ್ಲಾಕಿಕೊಳ್ಳಬೇಡಿ ಎಂದುವುದು ನಮ್ಮ ಕಳಕಳಿ.
ಇನ್ನು ನಮ್ಮ ಬೇಡಿಕೆಗಳು ಈಡೇರದಿದ್ದರೆ ನೌಕರರು ವೇತನ ಸಂಬಂಧ ಹೋರಾಟಕ್ಕೆ ಇಳಿಯುವ ಮನ್ನವೇ ನಾವೇ ಮುಂದಾಗುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ. ಇದರಿಂದ ಅಧಿಕಾರಿಗಳು ಮತ್ತು ನೌಕರರು ಒಗ್ಗಟ್ಟಿನಿಂದ ಸೌಲಭ್ಯ ಪಡೆಯುವುದಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮುನ್ಸೂಚನೆ ಕಾಣುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ, ಅದನ್ನು ಬಿಟ್ಟು ಮೂರ್ಖರಂತೆ ನಡೆದುಕೊಳ್ಳಬೇಡಿ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...