NEWSಬೆಂಗಳೂರು

ಸಿಲ್ಕ್ ಬೋರ್ಡ್ ಮೇಲ್ಸೇತುವೆ ವಾರದಲ್ಲಿ ಸಂಚಾರಕ್ಕೆ ಮುಕ್ತವಾಗದಿದ್ದರೆ ಜನರ ಜತೆ ನಾವೇ ಮುಕ್ತಗೊಳಿಸುತ್ತೇವೆ: ಎಎಪಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಸಿಲ್ಕ್ ಬೋರ್ಡ್‌ ಮೇಲ್ಸೇತುವೆಯನ್ನು (ಫ್ಲೈ ಓವರ್) ಸಂಚಾರಕ್ಕೆ ಮುಕ್ತಗೊಳಿಸಲು ಕಾಂಗ್ರೆಸ್ ಸರ್ಕಾರ ಮೀನಮೇಷ ಎಣಿಸುತ್ತಿದೆ. ಇದರಿಂದ ವಾಹನ ಸವಾರರು ನಿತ್ಯವೂ ಕಿಲೊಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಯಲ್ಲಿ ಸಿಲುಕುವಂತಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಅಶೋಕ್ ಮೃಂತ್ಯುಂಜಯ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಿಲ್ಕ್ ಬೋರ್ಡ್ ಬಳಿ ನಿರ್ಮಿಸಿರುವ ಮೇಲ್ಸೇತುವೆ ಬಳಿ ಜಮಾವಣೆಗೊಂಡ ಎಎಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್, 2018ರಲ್ಲಿ‌ ಆರಂಭಗೊಂಡ ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ.

ಈಗಲಾದರೂ ಸರ್ವಜನಿಕರಿಗೆ ಮುಕ್ತಗೊಳಿಸಬೇಕಿತ್ತು. ಆದರೆ, ಇನ್ನೂ ಮುಕ್ತಗೊಳಿಸದ ಕಾರಣ ಬೆಂಗಳೂರು ದಕ್ಷಿಣದಿಂದ ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸವಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ವಾರದೊಳಗೆ ಕ್ರಮವಹಿಸದಿದ್ದರೆ ಜನರೊಂದಿಗೆ ‌ಸೇರಿ‌‌ ನಾವೇ ಮೇಲ್ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಮಾತನಾಡಿ, ಪ್ರತಿ ಸಿಗ್ನಲ್ ನಲ್ಲೂ ವಾಹನ ಸವಾರರು ಅರ್ಧಗಂಟೆ ನಿಲ್ಲಲೇಬೇಕಾದ ಪರಿಸ್ಥಿತಿ ಉಂಟಾಗಿದೆ. ಐ.ಟಿ ಉದ್ಯೋಗಿಗಳು ಸಂಚಾರ ದಟ್ಟಣೆಯಿಂದ ತೀರ ತೊಂದರೆಗೊಳಗಾಗಿದ್ದಾರೆ ಎಂದರು.

ಮೇಲ್ಸೇತುವೆ ಜನರ ಅನುಕೂಲಕ್ಕಾಗಿ ನಿರ್ಮಿಸಿದ್ದರೂ ಸಕಾಲಕ್ಕೆ ಸಂಚಾರ ಮುಕ್ತ ಮಾಡದೆ ಜನರ ಹಣ ವ್ಯರ್ಥ ಮಾಡಲಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರು ಜನರಿಗೆ ಅನುಕೂಲ ಮಾಡಬೇಕೆ ವಿನಃ ನಷ್ಟವನ್ನಲ್ಲ. ಸಂಚಾರ ದಟ್ಟಣೆಯಿಂದ ಆಂಬುಲೆನ್ಸ್ ಸಹ ಕನಿಷ್ಠ ಇಪ್ಪತ್ತು ನಿಮಿಷ ನಿಲ್ಲಬೇಕಾದ ಸ್ಥಿತಿ ಉಂಟಾಗಿದೆ.  ಜನರ ಸಮಯ ಮತ್ತು ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಮೇಲ್ಸೇತುವೆ ಸಂಚಾರ ಮುಕ್ತಗೊಳಿಸಿ, ಆದಷ್ಟು ಬೇಗ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಪಕ್ಷದ ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ