NEWSಕೃಷಿನಮ್ಮರಾಜ್ಯ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸದಿದ್ದರೆ ಡಿ.13ರಂದು ಜಿ20 ರಾಷ್ಟ್ರಗಳ ಸಮಾವೇಶಕ್ಕೆ ಕಪ್ಪು ಬಾವುಟ ಪ್ರದರ್ಶನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಶಾಮಿಯಾನ ಸುರಿಯುತ್ತಿದ್ದರೂ ರೈತರು ಸರ್ಕಾರವನ್ನು ಶಪಿಸುತ್ತ ಅಡುಗೆ ಊಟ ಮಾಡಿ ಹೋರಾಟ ಮುಂದುವರಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ 19 ದಿನಗಳಿಂದ ಕಬ್ಬಿಗೆ ಸೂಕ್ತ ದರ ನಿಗದಿ ಪಡಿಸಬೇಕು ಎಂದು ರೈತರತ್ನ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ಹೋರಾಟ ಮಾಡುತ್ತಿರುವ ಕಬ್ಬು ಬೆಳೆಗಾರ ರೈತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರ್ಕಾರ ಕೃಷಿ ಇಲಾಖೆ ವರದಿಯಲ್ಲಿ ಕಬ್ಬು ಬೆಳೆದ ರೈತರಿಗೆ ಎಕರೆಗೆ 20 ಸಾವಿರ ರೂ. ನಷ್ಟವಾಗುತ್ತಿದೆ ಎನ್ನುತ್ತದೆ. ಅದೇ ಸರ್ಕಾರ ಯಾಕೆ ಕಬ್ಬಿಗೆ ಕೇವಲ 50 ರೂ. ಹೆಚ್ಚುವರಿ ಮಾಡಿ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ನಿಗದಿ ಮಾಡಿದ ಎಫ್ಆರ್‌ಪಿ ದರಕ್ಕೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಎಕರೆಗೆ 20ಸಾವಿರ ರೂ. ನಷ್ಟವಾಗುತ್ತದೆ ಎಂದು ಹೇಳುವ ಕೃಷಿ ಇಲಾಖೆ ವರದಿಯನ್ನು ಸಕ್ಕರೆ ಸಚಿವರು ನೋಡಿಲ್ಲವೆಂದು ಕಾಣುತ್ತದೆ. ಹೆಚ್ಚುವರಿಯಾಗಿ ಟನ್‌ಗೆ 50 ರೂ. ನೀಡಲು ಹೊರಡಿಸಿರುವ ಆದೇಶ ವಾಪಸ್ ಪಡೆದು ನ್ಯಾಯಯುತ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಒಂದು ಎಕರೆ ಕಬ್ಬು ಬೆಳೆಯಲು ಒಂದು ಲಕ್ಷ ಮೂವತ್ತಾರು ಸಾವಿರ ರೂ. ವೆಚ್ಚವಾಗುತ್ತದೆ. ಎಕರೆಗೆ 40 ಟನ್ ಕಬ್ಬು ಬೆಳೆದ ರೈತನಿಗೆ 20 ಸಾವಿರ ರೂ. ನಷ್ಟವಾಗುತ್ತದೆ ಎಂದು ಇದೇ ಸರ್ಕಾರ ವರದಿಯಲ್ಲಿ ಹೇಳುತ್ತದೆ. ಆದರೆ ಬೆಲೆ ಏರಿಕೆ ಮಾಡುವಾಗ ಭಿಕ್ಷೆಯ ರೀತಿಯಲ್ಲಿ ಏರಿಕೆ ಮಾಡುವುದು ಯಾವ ನ್ಯಾಯ, ಶುಗರ್ ಮಾಫಿಯಾ ಒತ್ತಡದಿಂದ ಹೊರಗೆ ಬಂದು ರೈತರಿಗೆ ನ್ಯಾಯಯುತ ಬೆಲೆ ನಿಗದಿ ಮಾಡಿಲ್ಲ ಎಂದು ಕಿಡಿಕಾರಿದರು.

ಸಕ್ಕರೆ ಕಾರ್ಖಾನೆಗಳು ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚ ಲಗಾಣಿ, ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಕೈವಾಡ ಇದೆ ವಾಮಮಾರ್ಗದ ಚುನಾವಣಾ ನಿಧಿ ಸಂಗ್ರಹ ಸಾಹಸವಾಗಿದೆ ಎಂದರು.

ರೈತರಿಗೆ ಮೋಸ ಮಾಡುತ್ತಾರೆ ಎಂದು ಆಪಾದಿಸುವ ಕಾರ್ಖಾನೆ ಮಾಲೀಕರೇ ನೀಡುವ ಪಾರದರ್ಶಕತೆ ಇಲ್ಲದ ಸಕ್ಕರೆ ಇಳುವರಿ ಹಾಗೂ ರೈತರಿಗೆ ಹಣ ಪಾವತಿ ವರದಿಯನ್ನು ಪಡೆದು ಸರ್ಕಾರ ಹೇಳಿಕೆ ನೀಡುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.

ಕಬ್ಬಿನಿಂದ ಬರುವ ಯಥನಾಲ್, ಮೊಲಾಸಿಸ್ ಬಗ್ಯಾಸ್, ಮಡ್ಡಿ ,ಸಕ್ಕರೆ, ಉತ್ಪನ್ನಗಳ ಲಾಭವನ್ನು ಪರಿಗಣಿಸಿ ಉತ್ಪಾದನೆಗೆ ತಗಲುವ ಖರ್ಚನ್ನ ತಯಾರಿಸುವ ವರದಿಯಲ್ಲಿ ರೈತ ಪ್ರತಿನಿಧಿಗಳು ಯಾಕೆ ಇರುವುದಿಲ್ಲ. ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರು, ಲೋಕಸಭಾ ಸದಸ್ಯರ ನಿಯೋಗ ಇದೆ ಡಿ. 19 /20 ರಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರು ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು.

ನಾಳೆ 11ರಂದು ಧರಣಿ ಸ್ಥಳದಲ್ಲಿ ದೆಹಲಿ ರೈತ ಹೋರಾಟದಲ್ಲಿ ಮಡಿದ ರೈತರಿಗೆ, ಶ್ರದ್ಧಾಂಜಲಿ ಸಲ್ಲಿಸುವ ದಿನ ಆಚರಿಸಲಾಗುವುದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರು ಭಾಗವಹಿಸಿ, ರೈತ ಹೋರಾಟದ 750 ಹುತಾತ್ಮ ರೈತರಿಗೆ ಮೇಣದಬತ್ತಿ ಉರಿಸಿ ಶ್ರದ್ಧಾಂಜಲಿ ನಮನ ಸಲ್ಲಿಸಲಾಗುವುದು
ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ತಿಳಿಸಿದೆ.

ಮಳೆಯನ್ನು ಲೆಕ್ಕಿಸದೆ ಅಹೋರಾತ್ರಿ ಧರಣಿಯಲ್ಲಿ ರೈತ ಮುಖಂಡರಾದ ಪಿ.ಸೋಮಶೇಖರ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕೆರೆಹುಂಡಿ ರಾಜಣ್ಣ, ಕಿರಗಸೂರ ಶಂಕರ, ಸಿದ್ದೇಶ ಕೆಂಡಗಣಸ್ವಾಮಿ, ಮಾದಪ್ಪ ವೆಂಕಟೇಶ್, ಮಹದೇವಸ್ವಾಮಿ, ರಾಜು, ಅಂಬಳೆ ಮಂಜುನಾಥ ಮುಂತಾದವರಿದ್ದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ