NEWSನಮ್ಮಜಿಲ್ಲೆನಮ್ಮರಾಜ್ಯ

ಮೂರ್ಖರಂತೆ ನಡೆದುಕೊಂಡರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಚ್ಚರ…!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಯಾರು ನೌಕರರಿಗೆ ತಪ್ಪು ಸಂದೇಶಕೊಡುವ ಮೂಲಕ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೋ ಅಂಥವರ ಬಗ್ಗೆ ನೌಕರರಿಗೆ ಸತ್ಯ ತಿಳಿಯಬೇಕೆಂದರೆ ಒಂದು ವೇದಿಕೆ ಆಯೋಜನೆ ಮಾಡಿ ಅಲ್ಲಿ ಅವರನ್ನು ಬೆತ್ತಲೆಗೊಳಿಸೋಣ ಅಂದರೆ ಅವರ ವಾಮಮಾರ್ಗದ ನಡೆ ನೌಕರರಿಗೂ ತಿಳಿಯಲಿ ಎಂಬ ನಿಟ್ಟಿನಲ್ಲಿ ವರದಿ ಮಾಡಿದರೆ ಅದನ್ನು ಬೇರೆ ರೀತಿ ಕೆಲ ನೌಕರರು ಬಿಂಬಿಸಿಕೊಂಡು ನಡೆದುಕೊಂಡಿರುವುದು ಮೂರ್ಖತನದ ಪರಮಾವಧಿಯಾಗಿದೆ.

ಇಂಥ ಶತಮೂರ್ಖರು ಇರುವುದರಿಂದ ಸಂಸ್ಥೆಯಲ್ಲಿ ಈಗಲೂ ಅಧಿಕಾರಿಗಳು ನೌಕರರ ಮಧ್ಯೆ ಒಡಕು ಉಂಟಾಗಿ ಒಬ್ಬರಿಗೊಬ್ಬರು ಶತ್ರುಗಳಂತೆ ನೋಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯ ಏನೆಂದು ಅರ್ಥ ಮಾಡಿಕೊಳ್ಳಲಾಗದೆ ನಾವು ಗ್ರಹಿಸಿದ್ದೆ ಸರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡಿದ್ದೀರಾ ಎಂದರೆ ಇದು ನಿಮ್ಮ ಬೌದ್ಧಿಕ ಮಟ್ಟವನ್ನು ತೋರಿಸುತ್ತದೆ.

ಅಷ್ಟಕ್ಕೂ ಆ ವರದಿಯ ಶೀರ್ಷಿಕೆ “KSRTC- ತಪ್ಪುಮಾಡಿದವರ ಬೆತ್ತಲೆಗೊಳಿಸಲು ನಾವು ಸಿದ್ಧ ನೀವು ಸಿದ್ಧರಿದ್ದೀರಾ?: ಜಯರಾಮ್‌ ರಾಥೋಡ್‌ ಸವಾಲು” ಎಂದು ಇದೆ. ಇದರ ಜತೆಗೆ ಯಾರು ಏನು ಹೇಳಿದ್ದಾರೆ ಎಂಬುದನ್ನು ತೋರಿಸುವುದಕ್ಕೆ ಒಂದು ಫೋಟೋ ಅಂದರೆ..

ಈ ಫೋಟೋವನ್ನು ಹಾಕಲಾಗಿದೆ. ಇದಕ್ಕೆ ಇಲ್ಲದ ಕತೆಕಟ್ಟಿ ಕೆಲವರು ನಡೆದುಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಈರೀತಿ ನಡೆದುಕೊಂಡರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ. ಈ ಬಗ್ಗೆ ನಿಮಗೆ ಅರಿವಿದೆಯೇ?

ಈ ಬಗ್ಗೆ ಚರ್ಚೆ ಮಾಡುವ ಮುನ್ನ ಯಾರು ಏನು ಹೇಳಿದ್ದಾರೆ ಎಂಬುದನ್ನು ಏಕೆ ತಿಳಿಯದೆ ಮನಸ್ಸಿಗೆ ಬಂದಂತೆ ಚರ್ಚೆ ಮಾಡುತ್ತೀರಿ ಇದು ನಿಮಗೆ ಸರಿ ಅನಿಸುತ್ತದೆಯೇ? ಹೌದು ಈ ವಿಷಯದಲ್ಲಿ ಆರೋಪ ಪ್ರತ್ಯಾರೋಪವಿದೆ. ಆದರೆ ಅದು ವೈಯಕ್ತಿಕವಾಗಿಲ್ಲ ಬದಲಿಗೆ ಕೆಲ ಸಂಘಟನೆಗಳು ನೌಕರರನ್ನು ಹೇಗೆ ದಾರಿ ತಪ್ಪಿಸುತ್ತಿವೆ ಎಂಬುದನ್ನು ಸಾಬೀತುಪಡಿಸುವುದಕ್ಕೆ ಏನು ಮಾಡಬೇಕು ಎಂಬುದರ ಬಗ್ಗೆ ಇದೆ.

ಇದನ್ನು ಅರ್ಥ ಮಾಡಿಕೊಳ್ಳದೆ ಯಾರನ್ನೋ ವೈಯಕ್ತಿಕವಾಗಿ ನಿಂದಿಸುವ ರೀತಿಯಲ್ಲಿ ನಡೆದುಕೊಳ್ಳುವುದು ಯಾರಿಗೂ ತರವಲ್ಲ. ಇದು ಮೂರ್ಖತನದ ಪರಮಾವಧಿ ಎಂದೇ ಹೇಳಬೇಕು. ಏಕೆಂದರೆ ಮೂರ್ಖರಾದವರು ಮಾತ್ರ ತಮಗೆ ಮನಬಂದ ರೀತಿ ತಿಳಿದು ಚರ್ಚೆಯಲ್ಲಿ ತೊಡಗುತ್ತಾರೆ. ಹೀಗಾಗಿ ಇನ್ನಾದರೂ ಇಂಥ ಮೂರ್ಖತನಕ್ಕೆ ಆಸ್ಪದಕೊಡದೆ ಉತ್ತಮ ನಾಗರಿಕರಾಗಿ ನಡೆದುಕೊಳ್ಳಿ. ಇಲ್ಲದಿದ್ದರೆ ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ಇದು ಮೂರ್ಖರ ರೀತಿ ನಡೆದುಕೊಳ್ಳುವ ಪ್ರತಿಯೊಬ್ಬರಿಗೂ ಎಚ್ಚರಿಕೆ.

ವಿಜಯಪಥ ಸಂ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು