Please assign a menu to the primary menu location under menu

CrimeNEWSನಮ್ಮರಾಜ್ಯ

ಅಕ್ರಮ ಮದ್ಯ ಸಾಗಣೆ ಆರೋಪ ಪ್ರಕರಣ: ಪಂಚನಾಮೆ ಆಧಾರದಲ್ಲಿ FIR ದಾಖಲು ಕಾನೂನು ಬಾಹಿರ – ಹೈ ಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರಿಂದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

ಕಾನೂನು ಬಾಹಿರವಾಗಿ ಮದ್ಯಸಾಗಾಟ ಆರೋಪದಲ್ಲಿ ಶಿಕ್ಷೆಗೆ ಒಳಗಾಗೊದ್ದ ದಯಾನಂದ ಮತ್ತು ರವಿ ಎಂಬುವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಯಾವುದೇ ಆರೋಪ ಎದುರಾದಲ್ಲಿ ಮಾಹಿತಿದಾರರು ಸಹಿ ಹಾಕಿ ನೀಡಿದ ದೂರಿನಿಂದ ಎಫ್‌ಐಆರ್ ದಾಖಲಿಸಬಹುದಾಗಿದೆ. ಇಲ್ಲವೇ, ನಿಖರ ಮಾಹಿತಿಯ ಆಧಾರದಲ್ಲಿ ಪೊಲೀಸ್ ಅಧಿಕಾರಿ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸುತ್ತಾರೆ. ಈ ಎರಡರಲ್ಲಿಯೂ ಮಾಹಿತಿಯನ್ನು ಮೊದಲು ಲಿಖಿತವಾಗಿ ದಾಖಲಿಸಿಕೊಂಡು ನಂತರ ತನಿಖೆ ನಡೆಸುತ್ತಾರೆ.

ಆದರೆ, ಪ್ರಸ್ತುತ ಪ್ರಕರಣದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ. ಬದಲಿಗೆ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವರಿಂದ ಮದ್ಯ ವಶಪಡಿಸಿಕೊಂಡು ಪಂಚನಾಮೆ ನಡೆಸಿದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮ. ಈ ಅಂಶ ಪರಿಗಣಿಸದೆ ಶಿಕ್ಷೆ ವಿಧಿಸಿರುವುದು ದೋಷದಿಂದ ಕೂಡಿದೆ ಎಂದು ನ್ಯಾಯಪೀಠ ಹೇಳಿದೆ.

ನಡೆದಿದ್ದು ಏನು? ಹುಣಸೂರಿನ ಅಬಕಾರಿ ವಿಭಾಗದ ಸಬ್ ಇನ್‌ಸ್ಪೆಕ್ಟರ್‌ 2008 ನವೆಂಬರ್ 24ರಂದು ಬೆಳಗ್ಗೆ 10.15ರ ಸಮಯದಲ್ಲಿ ಚಲ್ಲಹಳ್ಳಿ ಗ್ರಾಮದ ಬಳಿ ಸಿಬ್ಬಂದಿಯೊಂದಿಗೆ ಗಸ್ತು ತಿರುಗುವ ವೇಳೆ ಮೂಲಗಳಿಂದ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ಮದ್ಯ ಸಾಗಾಟ ಮಾಡುತ್ತಿರುವ ವಿಚಾರ ಗೊತ್ತಾಗಿತ್ತು.

ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಆರೋಪಿಯ ವಾಹನದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪಡೆದುಕೊಂಡಿದ್ದ ದಾಖಲೆ ಪರಿಶೀಲಿಸಿದರು. ಈ ಕುರಿತು ಸೂಕ್ತ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ವಾಹನ ಜಪ್ತಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದರು.

180 ಎಂಎಲ್‌ನ 48 ಒರಿಜಿನಲ್ ಚಾಯ್ಸ್‌ನ ವಿಸ್ಕಿ ಬಾಟಲ್ ವಶಪಡಿಸಿಕೊಂಡಿದ್ದರು. ಇದಾದ ಬಳಿಕ ವಶಕ್ಕೆ ಪಡೆದಿದ್ದ ಮದ್ಯವನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬಳಿಕ ಆರೋಪಿಗಳ ವಿರುದ್ದ ತನಿಖೆ ನಡೆಸಿ ಹುಣಸೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ್ದ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗಳಿಗೆ 5 ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಿತ್ತು. ಈ ಆದೇಶವನ್ನು ಮೈಸೂರಿನ ಸತ್ರ ನ್ಯಾಯಾಲಯ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ದಾಖಲಿಸಿದ್ದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...