NEWSನಮ್ಮರಾಜ್ಯ

ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ: ಬೋರ್ಡ್‌ ಹಾಕಿದ ಪ್ರಾಮಾಣಿಕ ಅಧಿಕಾರಿ ಲೋಕೇಶ್

ವಿಜಯಪಥ ಸಮಗ್ರ ಸುದ್ದಿ

ಹಾಸನ: ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳೆಂದರೆ ಅಲ್ಲಿ ಬರೀ ಲಂಚಬಾಕರೇ ಇರುತ್ತಾರೆ ಎನ್ನುವುದು ಜನರ ಮನಸ್ಸಿನಲ್ಲಿ ಬೇರೂರಿಬಿಟ್ಟಿದೆ. ಇದಕ್ಕೆ ಕಾರಣ ಸಣ್ಣಸಣ್ಣ ಕೆಲಸಗಳಿಗೂ ಸರ್ಕಾರಿ ಕಚೇರಿಯ ಅಧಿಕಾರಿಗಳು ಜನರನ್ನು ಅಲೆದಾಡಿಸುವುದಲ್ಲದೆ, ಅವರ ಬಳಿ ಹಣವನ್ನು ಪೀಕುತ್ತಿರುವುದು.

ಎಲ್ಲೆಡೆ ಈ ಲಂಚ ತಾಂಡವವಾಡುತ್ತಿರುವುದರ ಮಧ್ಯೆ ಹಾಸನದ ಬಿಇಒ ಕಚೇರಿಯ ಅಧೀಕ್ಷಕ ಡಿ.ಎಸ್. ಲೋಕೇಶ್ ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆಯುತ್ತಿದ್ದು, ಈ ವಿಚಾರ ಸಾಮಾಜಿಕ ಜಲಾತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಈ ಹಿಂದೆ ಮಾಜಿ ಪ್ರಧಾನಿ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಲೋಕೇಶ್ ಅವರು ತಮ್ಮ ಜನಸ್ನೇಹಿ ಕೆಲಸದಿಂದ‌ ಜನಮೆಚ್ಚುಗೆ ಗಳಿಸಿದ್ದರು. ಇದೀಗ ಪ್ರಮೋಷನ್ ಪಡೆದು ಬಿಇಒ ಕಚೇರಿಯ ಅಧೀಕ್ಷರಾಗಿದ್ದು, ಅವರು ಕರ್ತವ್ಯ ಆರಂಭಿಸಿದ ದಿನದಿಂದ ಹೀಗೊಂದು ಬೋರ್ಡ್ ಹಾಕಿ ಕೆಲಸ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ.

ಇನ್ನು ಇಂತಹ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿ ಎಂದು ಜನರು ಮನದಾಳದಿಂದ ಹೇಳುತ್ತಿದ್ದು, ಇವರಂತೆಯೇ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಏಕೆ ಬೋರ್ಡ್‌ ಹಾಕಿಕೊಳ್ಳಬಾರದು ಅಧಿಕಾರಿಗಳೂ ಎಂದು ಕೂಡ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನು ಈ ರೀತಿ ಬೋರ್ಡ್‌ ಹಾಕಿದರೆ ತಮ್ಮ ಬಳಿ ಬರುವವರಿಗೆ ಈ ಕೆಲಸಕ್ಕೆ ಎಷ್ಟು ಕೊಡಬೇಕೋ ಎಂಬ ಅಳುಕು ಇಲ್ಲದೆ ಕೆಲಸವನ್ನು ಮಾಡಿಸಿಕೊಳ್ಳುವುದಕ್ಕೆ ಮುಂದಾಗುತ್ತಾರೆ ಅಲ್ಲವೆ. ಅದು ಅಲ್ಲದೆ ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹೇಬರು ಇಷ್ಟು ಲಂಚ ಕೇಳುತ್ತಿದ್ದಾರೆ ನಾನು ಮಾತನಾಡುತ್ತೇನೆ ನೀನು ಇಷ್ಟು ಕೊಡು ಎಂದು ಹೇಳಿ ನಿಮಗೆ ಗೊತ್ತಿಲ್ಲದೆ ಸಿಬ್ಬಂದಿಗಳು ಲಂಚ ಪಡೆಯುವುದಕ್ಕೂ ಬ್ರೇಕ್‌ ಬೀಳುತ್ತದೆ ಅಲ್ಲವೆ ಎಂದು ಪ್ರಾಮಾಣಿಕ ಅಧಿಕಾರಿಗಳು ಈ ಕೆಲಸ ಮಾಡಿ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್